ಹುಣಸೂರು ಟೌನ್ ಪೊಲೀಸರ ಕಾರ್ಯಾಚರಣೆ…ಮನೆಗಳವು ಆರೋಪಿ ಬಂಧನ…18 ಕಳವು ಪ್ರಕರಣ ಪತ್ತೆ…ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳು ವಶ…

ಹುಣಸೂರು ಟೌನ್ ಪೊಲೀಸರ ಕಾರ್ಯಾಚರಣೆ…ಮನೆಗಳವು ಆರೋಪಿ ಬಂಧನ…18 ಕಳವು ಪ್ರಕರಣ ಪತ್ತೆ…ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳು ವಶ…

ಹುಣಸೂರು,ನ20,Tv10 ಕನ್ನಡ

ಹುಣಸೂರು ಟೌನ್ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳವು ಆರೋಪಿ ಬಂಧನವಾಗಿದೆ.ಬಂಧಿತನಿಂದ 1.72 ಲಕ್ಷ ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರಿನ ಬೆಲವತ್ತ ಗ್ರಾಮದ ಸೈಯದ್ ಉಸ್ಮಾನ್(35) ಬಂಧಿತ ಆರೋಪಿ.ಹುಣಸೂರಿನ ಬಜಾರ್ ರಸ್ತೆ,ಜೆ.ಎಲ್.ಬಿ.ರಸ್ತೆ,ಹಳೇ ಸೇತುವೆ ರಸ್ತೆಯ ಮೆಡಿಕಲ್ ಶಾಪ್ ಗಳಲ್ಲಿ ಕನ್ನ ಕಳುವು ಪ್ರಕರಣಗಳು ನಡೆದಿತ್ತು.ಈ ಸಂಭಂಧ ಖದೀಮನ ಬಂಧನಕ್ಕೆ ಹುಣಸೂರು ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ಜಾಲ ಬೀಸಿದ್ದರು.ಖತರ್ನಾಕ್ ಕಳ್ಳ ಪೊಲೀಸರು ಹಣೆದ ಜಾಲಕ್ಕೆ ಸಿಕ್ಕಿಬಿದ್ದಿದ್ದಾನೆ.ಹುಣಸೂರು,ಮೈಸೂರು,ಬೆಂಗಳೂರು,ರಾಮನಗರ,ಮಂಡ್ಯ,ನಂಜನಗೂಡು ಸೇರಿದಂತೆ ಇತರೆಡೆ ನಡೆದ 18 ಕನ್ನಕಳುವು ಪ್ರಕರಣಗಳು ಪತ್ತೆಯಾಗಿದೆ.ಬಂಧಿತನಿಂದ 1.72 ಲಕ್ಷ ನಗದು,10 ಗ್ರಾಂ ಚಿನ್ನಾಭರಣ,3 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ಉಸ್ತುವಾರಿಯಲ್ಲಿ ಹುಣಸೂರು ಟೌನ್ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕರಾದ ಸಂತೋಷ್ ಕಶ್ಯಪ್,ಪಿಎಸ್ಸೈ ಗಳಾದ ನಾಗಯ್ಯ ಹಾಗೂ ಜಮೀರ್ ಅಹ್ಮದ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಯೋಗೇಶ್,ಅರುಣ್,ರವೀಶ್,ಮಹೇಂದ್ತ,ದಿಲೀಪ್,ರವಿಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ…
ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಮೈಸೂರು,ಮಾ17,Tv10 ಕನ್ನಡ ಕಳೆದುಹೋಗಿದ್ದ 37 ಮೊಬೈಲ್ ಫೋನ್ ಗಳನ್ನು ದೇವರಾಜ ಠಾಣೆ ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದರು. ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಘು.ಕೆ.ಆರ್. ಉಪ ನಿರೀಕ್ಷಕರಾದ…
ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಬೆಂಗಳೂರು,ಮಾ17,Tv10 ಕನ್ನಡ ಬೆಂಗಳೂರಿನ ಗುಬ್ಬಿ ವೀರಣ್ಣ ಕಲಾ ಮಂಟಪದಲ್ಲಿ ಸಿಟಿ ಲೈಟ್ಸ್ ಚಿತ್ರೀಕರಣ ನಡೆಯುವ ಸಂಧರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ರವರ ಹುಟ್ಟು ಹಬ್ಬವನ್ನ ಆಚರಿಸಲಾಯಿತು. ಕೇಕ್…

Leave a Reply

Your email address will not be published. Required fields are marked *