ಹುಣಸೂರು ಟೌನ್ ಪೊಲೀಸರ ಕಾರ್ಯಾಚರಣೆ…ಮನೆಗಳವು ಆರೋಪಿ ಬಂಧನ…18 ಕಳವು ಪ್ರಕರಣ ಪತ್ತೆ…ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳು ವಶ…

ಹುಣಸೂರು ಟೌನ್ ಪೊಲೀಸರ ಕಾರ್ಯಾಚರಣೆ…ಮನೆಗಳವು ಆರೋಪಿ ಬಂಧನ…18 ಕಳವು ಪ್ರಕರಣ ಪತ್ತೆ…ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳು ವಶ…

ಹುಣಸೂರು,ನ20,Tv10 ಕನ್ನಡ

ಹುಣಸೂರು ಟೌನ್ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮನೆಗಳವು ಆರೋಪಿ ಬಂಧನವಾಗಿದೆ.ಬಂಧಿತನಿಂದ 1.72 ಲಕ್ಷ ನಗದು ಸೇರಿದಂತೆ 5.5 ಲಕ್ಷ ಮೌಲ್ಯದ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರಿನ ಬೆಲವತ್ತ ಗ್ರಾಮದ ಸೈಯದ್ ಉಸ್ಮಾನ್(35) ಬಂಧಿತ ಆರೋಪಿ.ಹುಣಸೂರಿನ ಬಜಾರ್ ರಸ್ತೆ,ಜೆ.ಎಲ್.ಬಿ.ರಸ್ತೆ,ಹಳೇ ಸೇತುವೆ ರಸ್ತೆಯ ಮೆಡಿಕಲ್ ಶಾಪ್ ಗಳಲ್ಲಿ ಕನ್ನ ಕಳುವು ಪ್ರಕರಣಗಳು ನಡೆದಿತ್ತು.ಈ ಸಂಭಂಧ ಖದೀಮನ ಬಂಧನಕ್ಕೆ ಹುಣಸೂರು ಠಾಣೆ ಇನ್ಸ್ಪೆಕ್ಟರ್ ಸಂತೋಷ್ ಕಶ್ಯಪ್ ಜಾಲ ಬೀಸಿದ್ದರು.ಖತರ್ನಾಕ್ ಕಳ್ಳ ಪೊಲೀಸರು ಹಣೆದ ಜಾಲಕ್ಕೆ ಸಿಕ್ಕಿಬಿದ್ದಿದ್ದಾನೆ.ಹುಣಸೂರು,ಮೈಸೂರು,ಬೆಂಗಳೂರು,ರಾಮನಗರ,ಮಂಡ್ಯ,ನಂಜನಗೂಡು ಸೇರಿದಂತೆ ಇತರೆಡೆ ನಡೆದ 18 ಕನ್ನಕಳುವು ಪ್ರಕರಣಗಳು ಪತ್ತೆಯಾಗಿದೆ.ಬಂಧಿತನಿಂದ 1.72 ಲಕ್ಷ ನಗದು,10 ಗ್ರಾಂ ಚಿನ್ನಾಭರಣ,3 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್,ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ರವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ಉಸ್ತುವಾರಿಯಲ್ಲಿ ಹುಣಸೂರು ಟೌನ್ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕರಾದ ಸಂತೋಷ್ ಕಶ್ಯಪ್,ಪಿಎಸ್ಸೈ ಗಳಾದ ನಾಗಯ್ಯ ಹಾಗೂ ಜಮೀರ್ ಅಹ್ಮದ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಯೋಗೇಶ್,ಅರುಣ್,ರವೀಶ್,ಮಹೇಂದ್ತ,ದಿಲೀಪ್,ರವಿಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *