ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ಮಹಿಳೆ ಕೊಂದ ಸ್ಥಳದಲ್ಲೇ ಹಸು ಬಲಿ ಪಡೆದ ಹುಲಿ…ಅರಣ್ಯಾಧಿಕಾರಿಗಳ ವಿರುದ್ದ ಸ್ಥಳೀಯರ ಆಕ್ರೋಷ…

ನಂಜನಗೂಡು,ನ20,Tv10 ಕನ್ನಡ

ಕಳೆದ ವರ್ಷ ಮಹಿಳೆಯನ್ನ ಕೊಂದಿದ್ದ ಸ್ಥಳದಲ್ಲೇ ಹುಲಿರಾಯ ಹಸುವೊಂದನ್ನ ಬಲಿ ಪಡೆದಿದ್ದಾನೆ.ಹುಲಿ ಕಾಟದಿಂದ ಮುಕ್ತಿ ಸಿಗದ ಹಿನ್ನಲೆ ಸ್ಥಳೀಯರು ಅರಣ್ಯಾಧಿಕಾರಿಗಳನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.ನಿಮ್ಮಿಂದ ಕಾಡಿಗಟ್ಟಲು ಸಾಧ್ಯವಿಲ್ಲವೆಂದ್ರೆ ನಾವೇ ಅಟ್ಟುತ್ತೇವೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ನಾಗಣಾಪುರದಲ್ಲಿ ಘಟನೆ ನಡೆದಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ವಲಯ ವ್ಯಾಪ್ತಿಯ ನಾಗಣಾಪುರದಲ್ಲಿ
ಪದೇ ಪದೇ ಹುಲಿ ಕಾಣಿಸಿಕೊಳ್ಳುತ್ತಿದೆ.
ಕಳೆದ ವರ್ಷ ಇದೆ ಸ್ಥಳದಲ್ಲಿ ಹುಲಿ ಮಹಿಳೆಯನ್ನು ಕೊಂದಿತ್ತು.
ಇದೀಗಾ ಹಸುವನ್ನ ಬಲಿ ಪಡೆದು ಮತ್ತೆ ಆತಂಕ ಸೃಷ್ಟಿ ಮಾಡಿದೆ.
ಹುಲಿ ಸೆರೆ ಹಿಡಿಯುವಂತೆ ಸ್ಥಳೀಯರ ಒತ್ತಾಯಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ
ಅರಣ್ಯಾಧಿಕಾರಿಯನ್ನ ತರಾಟೆ ತೆಗೆದುಕೊಂಡ ಯುವಕರು ನಿಮ್ಮಿಂದ ಹುಲಿಯನ್ನ ಕಾಡಿಗಟ್ಟಲು ಸಾಧ್ಯವಿಲ್ಲ ಅಂದ್ರೆ ನಾವೇ ಓಡಿಸುತ್ತೇವೆ ಎಂದು ಅಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.
ಹುಲಿ ದಾಳಿಯಿಂದ ಯಾರಾದರು ಸತ್ತ ಮೇಲೆ‌ ಬಂದು ನೀವು ಬಂದು ಮೌನಾಚರಣೆ ಮಾಡೋದು ಬೇಡ.
ನಾಳೆ ನೀವು ಬಂದು ಪರಿಹಾರ ಕೊಡುವುದು ಬೇಡ.
ನೀವು ಹುಲಿ ಬಗ್ಗೆ ಓದಿಕೊಂಡಿದ್ದೀರಾ ನಾವು ಅನುಭವಿಸುತ್ತಿದ್ದೇವೆ.
ನಿಮ್ಮ ಕೈಯಲ್ಲಿ ಶಾಶ್ವತ ಪರಿಹಾರ ಕೊಡಲು ಸಾಧ್ಯವಿಲ್ಲ.ಕಳೆದ ವರ್ಷ ಹುಲಿ ದಾಳಿಯಾಗಿ ಮಹಿಳೆ ಸಾವನಪ್ಪಿದ್ರು.
ಈಗ ಮತ್ತೆ ಜಾನುವಾರು ಮೇಲೆ ದಾಳಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *