ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ನಂಜನಗೂಡು,ನ20,Tv10 ಕನ್ನಡ

ಕಾಡುತೊರೆದು ನಾಡಿಗೆ ಬಂದು ನೆಲೆಸಿದರೂ ಮೂಲ ಆದಿವಾಸಿ ಜನರಿಗೆ ಬವಣೆ ತಪ್ಪಿಲ್ಲ.ಸರ್ಕಾರಿ ಸೌಲಭ್ಯಗಳಿಂದ ವಂಚಿತಾರದ ಸುಮಾರು 21 ಕುಟುಂಬ

ಹೈರಾಣರಾಗಿದ್ದಾರೆ.ಪರಿಶಿಷ್ಟ ಪಂಗಡ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇದೊಂದು ಉತ್ತಮ ನಿದರ್ಶನವಾಗಿದೆ.ನಂಜನಗೂಡು ತಾಲೂಕಿನ ಹುರ ಹಾಗೂ ಕಪ್ಪುಸೋಗೆ ಗ್ರಾಮದಲ್ಲಿ ಸುಮಾರು 21 ಕಾಡುಕುರುಬ ಸೋಲಿಗ ಜನಾಂಗದ ಕುಟುಂಬಗಳು ನೆಲೆಸಿವೆ.ಕೆಲವು ದಶಕಗಳ ಹಿಂದೆ ಸರ್ಕಾರ ನೀಡಿದ ಕರೆ ಮೇಲೆ ಕಾಡುತೊರೆದ ಈ ಕುಟುಂಬಗಳು ನಾಡು ಸೇರಿವೆ.ವರುಷಗಳೇ ಉರುಳಿದರೂ ಈ ಕುಟುಂಬಗಳು ಸರ್ಕಾರದ ಸವಲತ್ತುಗಳಿಂದ ವಂಚಿತವಾಗಿವೆ.
ಪೌಷ್ಟಿಕ ಆಹಾರ ಪದಾರ್ಥಗಳು ಇವರಿಗೆ ಮರೀಚಿಕೆಯಾಗಿವೆ
ವಾಸಿಸಲು ಮನೆ, ಸರ್ಕಾರದಿಂದ ಸಾಕಷ್ಟು ವರ್ಷಗಳಿಂದ ವಿತರಿಸಲಾಗುತ್ತಿರುವ ಪೌಷ್ಠಿಕ ಆಹಾರ ಪದಾರ್ಥ,ವಾಸದ ಗುಡಿಸಲು ಗಳಿಗೆ ವಿದ್ಯುತ್ ಸಂಪರ್ಕ ಬಂದಿಲ್ಲ.ಮೂರು ತಲೆಮಾರುಗಳ ಹಿಂದೆ ಕಾಡು ತೊರೆದು ನಾಡಿಗೆ ಬಂದು ನೆಲೆಸಿದರೂ ಇದುವರೆಗೂ ಪರಿಶಿಷ್ಟ ಪಂಗಡ ಅಧಿಕಾರಿಗಳು ಇವರ ಕುಟುಂಬದ ಬಳಿ ಭೇಟಿ ನೀಡಿ ಪರಿಶೀಲಿಸಿಲ್ಲ.ಸಂಕಷ್ಟದ ಪರಿಸ್ಥಿತಿಯಲ್ಲಿ ಹೀನಾಯ ಬದುಕು ಸಾಗಿಸುತ್ತಿರುವ ಈ ಕುಟುಂಬಗಳ ಬವಣೆ ತಪ್ಪುವುದು ಯಾವಾಗ..?

Spread the love

Related post

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ…

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ…

ಬೀದಿ ನಾಯಿಗಳ ದಾಳಿ…ನೂರಾರು ಕೋಳಿಗಳ ಮಾರಣಹೋಮ… ಮಂಡ್ಯ,ನ10,Tv10 ಬೀದಿ ನಾಯಿಗಳ ದಾಳಿಗೆ ನೂರಾರು ಕೋಳಿಗಳು ಬಲಿಯಾಗಿವೆ.ಸಾಗಾಣಿಕೆ ಘಟಕದಲ್ಲಿದ್ದ 400 ಕ್ಕೂ ಹೆಚ್ಚು ಕೋಳಿಗಳು ಸಾವನ್ನಪ್ಪಿವೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನವಳಗೆರೆಹಳ್ಳಿ…
ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ…

ಹುಲಿ ದಾಳಿಗೆ ಮೂವರು ರೈತರು ಬಲಿ ಹಿನ್ನಲೆ…ಬಂಡೀಪುರ ನಾಗರಹೊಳೆ ಸಫಾರಿ ಸಂಪೂರ್ಣ ಬಂದ್… ಬೆಂಗಳೂರು,ನ7,Tv10 ಕನ್ನಡ ಹುಲಿ ದಾಳಿ ಪ್ರಕರಣಗಳು ಸರ್ಕಾರದ ನಿದ್ದೆ ಕೆಡಿಸಿದೆ.ಮೂರು ಸಾವು ಜನಜಾನುವಾರುಗಳ ಮೇಲೆ…
KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು…

KRSನಲ್ಲಿ ಮತ್ತೆ ಭದ್ರತಾ ಲೋಪ ಆರೋಪ…ನಿರ್ಬಂಧಿತ ಪ್ರದೇಶದಲ್ಲಿ ಪ್ರಭಾವಿಗಳ ಕಾರುಬಾರು… ಮಂಡ್ಯ,ನ4,Tv10 ಕನ್ನಡ ಕೆ.ಆರ್.ಎಸ್.ನಲ್ಲಿ ಮತ್ತೆ ಭದ್ರತಾ ಲೋಪದ ಕೂಗು ಕೇಳಿ ಬರುತ್ತಿದೆ.ಪದೇ ಪದೇ ಭದ್ರತಾ ಲೋಪವಾದರೂ ಸಂಬಧಪಟ್ಟವರು…

Leave a Reply

Your email address will not be published. Required fields are marked *