ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ನಂಜನಗೂಡು,ನ20,Tv10 ಕನ್ನಡ

ಕಾಡುತೊರೆದು ನಾಡಿಗೆ ಬಂದು ನೆಲೆಸಿದರೂ ಮೂಲ ಆದಿವಾಸಿ ಜನರಿಗೆ ಬವಣೆ ತಪ್ಪಿಲ್ಲ.ಸರ್ಕಾರಿ ಸೌಲಭ್ಯಗಳಿಂದ ವಂಚಿತಾರದ ಸುಮಾರು 21 ಕುಟುಂಬ

ಹೈರಾಣರಾಗಿದ್ದಾರೆ.ಪರಿಶಿಷ್ಟ ಪಂಗಡ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇದೊಂದು ಉತ್ತಮ ನಿದರ್ಶನವಾಗಿದೆ.ನಂಜನಗೂಡು ತಾಲೂಕಿನ ಹುರ ಹಾಗೂ ಕಪ್ಪುಸೋಗೆ ಗ್ರಾಮದಲ್ಲಿ ಸುಮಾರು 21 ಕಾಡುಕುರುಬ ಸೋಲಿಗ ಜನಾಂಗದ ಕುಟುಂಬಗಳು ನೆಲೆಸಿವೆ.ಕೆಲವು ದಶಕಗಳ ಹಿಂದೆ ಸರ್ಕಾರ ನೀಡಿದ ಕರೆ ಮೇಲೆ ಕಾಡುತೊರೆದ ಈ ಕುಟುಂಬಗಳು ನಾಡು ಸೇರಿವೆ.ವರುಷಗಳೇ ಉರುಳಿದರೂ ಈ ಕುಟುಂಬಗಳು ಸರ್ಕಾರದ ಸವಲತ್ತುಗಳಿಂದ ವಂಚಿತವಾಗಿವೆ.
ಪೌಷ್ಟಿಕ ಆಹಾರ ಪದಾರ್ಥಗಳು ಇವರಿಗೆ ಮರೀಚಿಕೆಯಾಗಿವೆ
ವಾಸಿಸಲು ಮನೆ, ಸರ್ಕಾರದಿಂದ ಸಾಕಷ್ಟು ವರ್ಷಗಳಿಂದ ವಿತರಿಸಲಾಗುತ್ತಿರುವ ಪೌಷ್ಠಿಕ ಆಹಾರ ಪದಾರ್ಥ,ವಾಸದ ಗುಡಿಸಲು ಗಳಿಗೆ ವಿದ್ಯುತ್ ಸಂಪರ್ಕ ಬಂದಿಲ್ಲ.ಮೂರು ತಲೆಮಾರುಗಳ ಹಿಂದೆ ಕಾಡು ತೊರೆದು ನಾಡಿಗೆ ಬಂದು ನೆಲೆಸಿದರೂ ಇದುವರೆಗೂ ಪರಿಶಿಷ್ಟ ಪಂಗಡ ಅಧಿಕಾರಿಗಳು ಇವರ ಕುಟುಂಬದ ಬಳಿ ಭೇಟಿ ನೀಡಿ ಪರಿಶೀಲಿಸಿಲ್ಲ.ಸಂಕಷ್ಟದ ಪರಿಸ್ಥಿತಿಯಲ್ಲಿ ಹೀನಾಯ ಬದುಕು ಸಾಗಿಸುತ್ತಿರುವ ಈ ಕುಟುಂಬಗಳ ಬವಣೆ ತಪ್ಪುವುದು ಯಾವಾಗ..?

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *