ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ಕಾಡು ತೊರೆದು ನಾಡಿಗೆ ಬಂದ್ರೂ ಮೂಲ ಆದಿವಾಸಿಗಳಿಗೆ ಸಿಗದ ಸರ್ಕಾರಿ ಸೌಲಭ್ಯ…21 ಕುಟುಂಬ ಹೈರಾಣು…

ನಂಜನಗೂಡು,ನ20,Tv10 ಕನ್ನಡ

ಕಾಡುತೊರೆದು ನಾಡಿಗೆ ಬಂದು ನೆಲೆಸಿದರೂ ಮೂಲ ಆದಿವಾಸಿ ಜನರಿಗೆ ಬವಣೆ ತಪ್ಪಿಲ್ಲ.ಸರ್ಕಾರಿ ಸೌಲಭ್ಯಗಳಿಂದ ವಂಚಿತಾರದ ಸುಮಾರು 21 ಕುಟುಂಬ

ಹೈರಾಣರಾಗಿದ್ದಾರೆ.ಪರಿಶಿಷ್ಟ ಪಂಗಡ ಅಧಿಕಾರಿಗಳ ನಿರ್ಲಕ್ಷತನಕ್ಕೆ ಇದೊಂದು ಉತ್ತಮ ನಿದರ್ಶನವಾಗಿದೆ.ನಂಜನಗೂಡು ತಾಲೂಕಿನ ಹುರ ಹಾಗೂ ಕಪ್ಪುಸೋಗೆ ಗ್ರಾಮದಲ್ಲಿ ಸುಮಾರು 21 ಕಾಡುಕುರುಬ ಸೋಲಿಗ ಜನಾಂಗದ ಕುಟುಂಬಗಳು ನೆಲೆಸಿವೆ.ಕೆಲವು ದಶಕಗಳ ಹಿಂದೆ ಸರ್ಕಾರ ನೀಡಿದ ಕರೆ ಮೇಲೆ ಕಾಡುತೊರೆದ ಈ ಕುಟುಂಬಗಳು ನಾಡು ಸೇರಿವೆ.ವರುಷಗಳೇ ಉರುಳಿದರೂ ಈ ಕುಟುಂಬಗಳು ಸರ್ಕಾರದ ಸವಲತ್ತುಗಳಿಂದ ವಂಚಿತವಾಗಿವೆ.
ಪೌಷ್ಟಿಕ ಆಹಾರ ಪದಾರ್ಥಗಳು ಇವರಿಗೆ ಮರೀಚಿಕೆಯಾಗಿವೆ
ವಾಸಿಸಲು ಮನೆ, ಸರ್ಕಾರದಿಂದ ಸಾಕಷ್ಟು ವರ್ಷಗಳಿಂದ ವಿತರಿಸಲಾಗುತ್ತಿರುವ ಪೌಷ್ಠಿಕ ಆಹಾರ ಪದಾರ್ಥ,ವಾಸದ ಗುಡಿಸಲು ಗಳಿಗೆ ವಿದ್ಯುತ್ ಸಂಪರ್ಕ ಬಂದಿಲ್ಲ.ಮೂರು ತಲೆಮಾರುಗಳ ಹಿಂದೆ ಕಾಡು ತೊರೆದು ನಾಡಿಗೆ ಬಂದು ನೆಲೆಸಿದರೂ ಇದುವರೆಗೂ ಪರಿಶಿಷ್ಟ ಪಂಗಡ ಅಧಿಕಾರಿಗಳು ಇವರ ಕುಟುಂಬದ ಬಳಿ ಭೇಟಿ ನೀಡಿ ಪರಿಶೀಲಿಸಿಲ್ಲ.ಸಂಕಷ್ಟದ ಪರಿಸ್ಥಿತಿಯಲ್ಲಿ ಹೀನಾಯ ಬದುಕು ಸಾಗಿಸುತ್ತಿರುವ ಈ ಕುಟುಂಬಗಳ ಬವಣೆ ತಪ್ಪುವುದು ಯಾವಾಗ..?

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *