ಹೋಟೆಲ್ ಬಿಲ್ ಪಾವತಿಸದ ಆರೋಪ…10 ದಿನಗಳ ನಂತರ ಮಹಿಳೆ ಮೇಲೆ ಹಲ್ಲೆ…ಮಾಲೀಕರು ಸೇರಿದಂತೆ ಮೂವರ ವಿರುದ್ದ FIR ದಾಖಲು…

ಹೋಟೆಲ್ ಬಿಲ್ ಪಾವತಿಸದ ಆರೋಪ…10 ದಿನಗಳ ನಂತರ ಮಹಿಳೆ ಮೇಲೆ ಹಲ್ಲೆ…ಮಾಲೀಕರು ಸೇರಿದಂತೆ ಮೂವರ ವಿರುದ್ದ FIR ದಾಖಲು…

ಮೈಸೂರು,ನ25,Tv10 ಕನ್ನಡ

ಹೋಟೆಲ್ ಬಿಲ್ ಪಾವತಿ ಮಾಡಿಲ್ಲವೆಂದು ಆರೋಪಿಸಿ ಮಾಲೀಕರು ಸೇರಿದಂತೆ ಮೂವರು ವ್ಯಕ್ತಿಗಳು ಮಹಿಳೆಯೋರ್ವರನ್ನ ನಡುರಸ್ತೆಯಲ್ಲಿ ಹಿಡಿದು ಹಲ್ಲೆ ನಡೆಸಿದ ಘಟನೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚವಟಿ ಸರ್ಕಲ್ ಬಳಿ ನಡೆದಿದೆ.ಮೈಸೂರು ಕಿಚನ್ ಹೋಟೆಲ್ ಮಾಲೀಕರಾದ ಸವಿತಾ ಸೇರಿದಂತೆ ಮೂವರ ವಿರುದ್ದ ಜಯಲಕ್ಷ್ಮಿಪಿರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಹಲ್ಲೆಗೊಳಗಾದ ಶೋಭಾ(40) ಎಂಬುವರು ಪ್ರಕರಣ ದಾಖಲಿಸಿದ್ದಾರೆ.

ಹೂವು ಮಾರಾಟ ಮಾಡುವ ಶೋಭಾ ರವರು 12-11-24 ರಂದು ಮೈಸೂರು ಕಿಚನ್ ಹೋಟೆಲ್ ನಲ್ಲಿ ಖಾರಾಬಾತ್ ಹಾಗೂ ರೈಸ್ ಭಾತ್ ಖರೀದಿಸಿದ್ದಾರೆ.170/- ರೂ ಬಿಲ್ ಪಾವತಿಸಿದ್ದಾರೆ.ಹೀಗಿದ್ದೂ 10 ದಿನಗಳ ನಂತರ ಮಾಲೀಕರಾದ ಸವಿತಾ ಇಬ್ಬರು ವ್ಯಕ್ತಿಗಳನ್ನ ಕಾರಿನಲ್ಲಿ ಕರೆತಂದು ಪಂಚವಟಿ ಸರ್ಕಲ್ ಬಳಿ ಹೋಗುತ್ತಿದ್ದ ಶೋಭಾ ರವರನ್ನ ಅಡ್ಡಗಟ್ಟಿ ಬಿಲ್ ಪಾವತಿಸಿಲ್ಲವೆಂದು ಆರೋಪಿಸಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾರ್ವಜನಿಕವಾಗಿ ಅಪಮಾನ ಮಾಡಿದ್ದಾರೆ.ಹಲ್ಲೆಯಿಂದ ಶೋಭಾ ರವರ ಕಿವಿ ತಮಟೆ ಹೊಡೆದುಹೋಗಿದೆ ಎಂದು ಆರೋಪಿಸಿರುವ ಶೋಭಾ ಸವಿತಾ ಹಾಗೂ ಇಬ್ಬರು ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ FIR ದಾಖಲಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *