ಹೋಟೆಲ್ ಬಿಲ್ ಪಾವತಿಸದ ಆರೋಪ…10 ದಿನಗಳ ನಂತರ ಮಹಿಳೆ ಮೇಲೆ ಹಲ್ಲೆ…ಮಾಲೀಕರು ಸೇರಿದಂತೆ ಮೂವರ ವಿರುದ್ದ FIR ದಾಖಲು…

ಹೋಟೆಲ್ ಬಿಲ್ ಪಾವತಿಸದ ಆರೋಪ…10 ದಿನಗಳ ನಂತರ ಮಹಿಳೆ ಮೇಲೆ ಹಲ್ಲೆ…ಮಾಲೀಕರು ಸೇರಿದಂತೆ ಮೂವರ ವಿರುದ್ದ FIR ದಾಖಲು…

ಮೈಸೂರು,ನ25,Tv10 ಕನ್ನಡ

ಹೋಟೆಲ್ ಬಿಲ್ ಪಾವತಿ ಮಾಡಿಲ್ಲವೆಂದು ಆರೋಪಿಸಿ ಮಾಲೀಕರು ಸೇರಿದಂತೆ ಮೂವರು ವ್ಯಕ್ತಿಗಳು ಮಹಿಳೆಯೋರ್ವರನ್ನ ನಡುರಸ್ತೆಯಲ್ಲಿ ಹಿಡಿದು ಹಲ್ಲೆ ನಡೆಸಿದ ಘಟನೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚವಟಿ ಸರ್ಕಲ್ ಬಳಿ ನಡೆದಿದೆ.ಮೈಸೂರು ಕಿಚನ್ ಹೋಟೆಲ್ ಮಾಲೀಕರಾದ ಸವಿತಾ ಸೇರಿದಂತೆ ಮೂವರ ವಿರುದ್ದ ಜಯಲಕ್ಷ್ಮಿಪಿರಂ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಹಲ್ಲೆಗೊಳಗಾದ ಶೋಭಾ(40) ಎಂಬುವರು ಪ್ರಕರಣ ದಾಖಲಿಸಿದ್ದಾರೆ.

ಹೂವು ಮಾರಾಟ ಮಾಡುವ ಶೋಭಾ ರವರು 12-11-24 ರಂದು ಮೈಸೂರು ಕಿಚನ್ ಹೋಟೆಲ್ ನಲ್ಲಿ ಖಾರಾಬಾತ್ ಹಾಗೂ ರೈಸ್ ಭಾತ್ ಖರೀದಿಸಿದ್ದಾರೆ.170/- ರೂ ಬಿಲ್ ಪಾವತಿಸಿದ್ದಾರೆ.ಹೀಗಿದ್ದೂ 10 ದಿನಗಳ ನಂತರ ಮಾಲೀಕರಾದ ಸವಿತಾ ಇಬ್ಬರು ವ್ಯಕ್ತಿಗಳನ್ನ ಕಾರಿನಲ್ಲಿ ಕರೆತಂದು ಪಂಚವಟಿ ಸರ್ಕಲ್ ಬಳಿ ಹೋಗುತ್ತಿದ್ದ ಶೋಭಾ ರವರನ್ನ ಅಡ್ಡಗಟ್ಟಿ ಬಿಲ್ ಪಾವತಿಸಿಲ್ಲವೆಂದು ಆರೋಪಿಸಿ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಸಾರ್ವಜನಿಕವಾಗಿ ಅಪಮಾನ ಮಾಡಿದ್ದಾರೆ.ಹಲ್ಲೆಯಿಂದ ಶೋಭಾ ರವರ ಕಿವಿ ತಮಟೆ ಹೊಡೆದುಹೋಗಿದೆ ಎಂದು ಆರೋಪಿಸಿರುವ ಶೋಭಾ ಸವಿತಾ ಹಾಗೂ ಇಬ್ಬರು ವ್ಯಕ್ತಿಗಳ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ FIR ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *