ಮೈಸೂರು ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟ…ನ.27 ರಿಂದ 3 ದಿನಗಳ ಕಾಲ ನಡೆಯಲಿರುವ ಸ್ಪೋರ್ಟ್ಸ್…

ಮೈಸೂರು ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟ…ನ.27 ರಿಂದ 3 ದಿನಗಳ ಕಾಲ ನಡೆಯಲಿರುವ ಸ್ಪೋರ್ಟ್ಸ್…

ಮೈಸೂರು,ನ25,Tv10 ಕನ್ನಡ

ನವೆಂಬರ್ 27 ರಿಂದ 3 ದಿನಗಳ ಕಾಲ ಮೈಸೂರು ಜಿಲ್ಲಾ ಪೊಲೀಸರ 2024 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ ನಡೆಯಲಿದೆ. ನವೆಂಬರ್ 27 ರಂದು ಬೆಳಿಗ್ಗೆ 9 ಗಂಟೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಖ್ಯಾತಿ ಪಡೆದ ಕಿಕ್ ಬಾಕ್ಸಿಂಗ್ ಕ್ರೀಡಾಪಟು ಕು.ಸಹನಾ ಕ್ರೀಡಾಕೂಟವನ್ನ ಉದ್ಘಾಟಿಸಲಿದ್ದಾರೆ.ನವೆಂಬರ್ 29 ರಂದು ಸಂಜೆ 4 ಗಂಟೆಗೆ ಡಿಎಆರ್ ಮೈದಾನದಲ್ಲಿ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು ದಕ್ಷಿಣ ವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಡಾ.ಬೋರಲಿಂಗಯ್ಯ ರವರು ಅಧ್ಯಕ್ಷತೆ ವಹಿಸಲಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಅವಿರತ ಶ್ರಮ ಹಾಕುವ ಖಾಕಿ ಪಡೆ ಮೂರು ದಿನಗಳ ಕಾಲ ಕ್ರೀಡಾಕೂಟದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಲಿದೆ.ಲಾಠಿ ಹಿಡಿಯಲೂ ಸೈ…ಮೈದಾನದಲ್ಲಿ ಮಿಂಚಿನಂತೆ ಆಟವಾಡುವಲ್ಲೂ ಸೈ…ಎಂಬುದನ್ನ ಪೊಲೀಸರು ಮೂರು ದಿನಗಳ ಕ್ರೀಡಾಕೂಟದಲ್ಲಿ ನಿರೂಪಿಸಲಿದ್ದಾರೆ.ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಎನ್. ರವರ ನೇತೃತ್ವದಲ್ಲಿ ಕ್ರೀಡಾಕೂಟ ನಡೆಯಲಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *