ಪಂಡರಾಪುರದಲ್ಲಿ ವಿಠಲನ ದರುಶನ ಪಡೆದು ಹಿಂದಿರುಗಿದ ದಂಪತಿಗೆ ಶಾಕ್…ಕಾರು,ಬೆಳ್ಳಿ ಪದಾರ್ಥಗಳು ಕಳ್ಳರ ಪಾಲು…

ಪಂಡರಾಪುರದಲ್ಲಿ ವಿಠಲನ ದರುಶನ ಪಡೆದು ಹಿಂದಿರುಗಿದ ದಂಪತಿಗೆ ಶಾಕ್…ಕಾರು,ಬೆಳ್ಳಿ ಪದಾರ್ಥಗಳು ಕಳ್ಳರ ಪಾಲು…

ಮೈಸೂರು,ನ26,Tv10 ಕನ್ನಡ

ಮಹಾರಾಷ್ಟ್ರ ಪಂಡರಾಪುರದ ವಿಠಲನ ದರುಶನ ಪಡೆದು ಮನೆಗೆ ಹಿಂದಿರುಗಿದ ದಂಪತಿಗೆ ಕಳ್ಳರು ಶಾಕ್ ಕೊಟ್ಟಿದ್ದಾರೆ.ಮನೆಯಲ್ಲಿದ್ದ ಬೆಳ್ಳಿ ಪದಾರ್ಥ,ಕಂಚಿನ ಪದಾರ್ಥ ಹಾಗೂ ಕಾರನ್ನ ದೋಚಿ ಪರಾರಿಯಾಗಿದ್ದಾರೆ.ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕೃತಿ ಬಡಾವಣೆಯಲ್ಲಿ ಘಟನೆ ನಡೆದಿದೆ.ವಿದ್ಯುತ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀನಿವಾಸ ಮೂರ್ತಿ ಎಂಬುವರ ಮನೆಯಲ್ಲಿ ಕಳ್ಳರು ಕೈಚಳಕ ನಡೆಸಿದ್ದಾರೆ.

ಶ್ರೀನಿವಾಸ ಮೂರ್ತಿ ಹಾಗೂ ಇವರ ಪತ್ನಿ ಸಂಗೀತಾ ರವರು ನಂಜನಗೂಡಿನಲ್ಲಿ ಮೀಟರ್ ರೀಡಿಂಗ್ ಕೆಲಸ ಮಾಡುತ್ತಿದ್ದಾರೆ.ನಂಜನಗೂಡಿನಲ್ಲೂ ಸಹ ಮನೆ ಬಾಡಿಗೆ ಪಡೆದು ವಾರದಲ್ಲಿ 4 ದಿನ ನಂಜನಗೂಡು 3 ದಿನ ಮೈಸೂರಿನಲ್ಲಿ ಇರುತ್ತಾರೆ.ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ವಿಠಲನ ದರುಶನ ಪಡೆಯಲು ತೆರಳಿದ ದಂಪತಿ ಮೈಸೂರಿನ ನಾಡನಹಳ್ಳಿ ಮನೆಗೆ ಹಿಂದಿರುಗಿದಾಗ ಬಾಗಿಲು ತೆರೆದಿತ್ತು.ಒಳಗೆ ಪ್ರವೇಶಿಸಿ ಪರಿಶಿಲಿಸಿದಾಗ ಬೆಳ್ಳಿ ಪದಾರ್ಥಗಳು,ಕಂಚಿನ ಪದಾರ್ಥಗಳು ಹಾಗೂ ಟಾಟಾ ಇಂಡಿಕಾ ಕಾರನ್ನ ದೋಚಿ ಪರಾರಿಯಾಗಿದ್ದಾರೆ.ಕಳುವಾಗಿರುವ ಪದಾರ್ಥಗಳ ಒಟ್ಟು ಮೌಲ್ಯ 81,600/- ರೂಗಳೆಂದು ಅಂದಾಜಿಸಲಾಗಿದ್ದು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸ ಮೂರ್ತಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *