ಪಂಡರಾಪುರದಲ್ಲಿ ವಿಠಲನ ದರುಶನ ಪಡೆದು ಹಿಂದಿರುಗಿದ ದಂಪತಿಗೆ ಶಾಕ್…ಕಾರು,ಬೆಳ್ಳಿ ಪದಾರ್ಥಗಳು ಕಳ್ಳರ ಪಾಲು…

ಪಂಡರಾಪುರದಲ್ಲಿ ವಿಠಲನ ದರುಶನ ಪಡೆದು ಹಿಂದಿರುಗಿದ ದಂಪತಿಗೆ ಶಾಕ್…ಕಾರು,ಬೆಳ್ಳಿ ಪದಾರ್ಥಗಳು ಕಳ್ಳರ ಪಾಲು…

ಮೈಸೂರು,ನ26,Tv10 ಕನ್ನಡ

ಮಹಾರಾಷ್ಟ್ರ ಪಂಡರಾಪುರದ ವಿಠಲನ ದರುಶನ ಪಡೆದು ಮನೆಗೆ ಹಿಂದಿರುಗಿದ ದಂಪತಿಗೆ ಕಳ್ಳರು ಶಾಕ್ ಕೊಟ್ಟಿದ್ದಾರೆ.ಮನೆಯಲ್ಲಿದ್ದ ಬೆಳ್ಳಿ ಪದಾರ್ಥ,ಕಂಚಿನ ಪದಾರ್ಥ ಹಾಗೂ ಕಾರನ್ನ ದೋಚಿ ಪರಾರಿಯಾಗಿದ್ದಾರೆ.ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕೃತಿ ಬಡಾವಣೆಯಲ್ಲಿ ಘಟನೆ ನಡೆದಿದೆ.ವಿದ್ಯುತ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀನಿವಾಸ ಮೂರ್ತಿ ಎಂಬುವರ ಮನೆಯಲ್ಲಿ ಕಳ್ಳರು ಕೈಚಳಕ ನಡೆಸಿದ್ದಾರೆ.

ಶ್ರೀನಿವಾಸ ಮೂರ್ತಿ ಹಾಗೂ ಇವರ ಪತ್ನಿ ಸಂಗೀತಾ ರವರು ನಂಜನಗೂಡಿನಲ್ಲಿ ಮೀಟರ್ ರೀಡಿಂಗ್ ಕೆಲಸ ಮಾಡುತ್ತಿದ್ದಾರೆ.ನಂಜನಗೂಡಿನಲ್ಲೂ ಸಹ ಮನೆ ಬಾಡಿಗೆ ಪಡೆದು ವಾರದಲ್ಲಿ 4 ದಿನ ನಂಜನಗೂಡು 3 ದಿನ ಮೈಸೂರಿನಲ್ಲಿ ಇರುತ್ತಾರೆ.ಕೆಲವು ದಿನಗಳ ಹಿಂದೆ ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ವಿಠಲನ ದರುಶನ ಪಡೆಯಲು ತೆರಳಿದ ದಂಪತಿ ಮೈಸೂರಿನ ನಾಡನಹಳ್ಳಿ ಮನೆಗೆ ಹಿಂದಿರುಗಿದಾಗ ಬಾಗಿಲು ತೆರೆದಿತ್ತು.ಒಳಗೆ ಪ್ರವೇಶಿಸಿ ಪರಿಶಿಲಿಸಿದಾಗ ಬೆಳ್ಳಿ ಪದಾರ್ಥಗಳು,ಕಂಚಿನ ಪದಾರ್ಥಗಳು ಹಾಗೂ ಟಾಟಾ ಇಂಡಿಕಾ ಕಾರನ್ನ ದೋಚಿ ಪರಾರಿಯಾಗಿದ್ದಾರೆ.ಕಳುವಾಗಿರುವ ಪದಾರ್ಥಗಳ ಒಟ್ಟು ಮೌಲ್ಯ 81,600/- ರೂಗಳೆಂದು ಅಂದಾಜಿಸಲಾಗಿದ್ದು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸ ಮೂರ್ತಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *