ಸರಸ್ವತಿಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಖತರ್ನಾಕ್ ಕಳ್ಳನ ಬಂಧನ…5.13 ಲಕ್ಷ ಮೌಲ್ಯದ ಚಿನ್ನಾಭರಣ,ದ್ವಿಚಕ್ರ ವಾಹನ ವಶ…

ಸರಸ್ವತಿಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಖತರ್ನಾಕ್ ಕಳ್ಳನ ಬಂಧನ…5.13 ಲಕ್ಷ ಮೌಲ್ಯದ ಚಿನ್ನಾಭರಣ,ದ್ವಿಚಕ್ರ ವಾಹನ ವಶ…

ಮೈಸೂರು,ನ27,Tv10 ಕನ್ನಡ

ವಾಕಿಂಗ್ ಮಾಡುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತು ಪರಾರಿಯಾದ ಖತರ್ನಾಕ್ ಕಳ್ಳನನ್ನ ಬಂಧಿಸುವಲ್ಲಿ ಸರಸ್ವತಿಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 5 ದ್ವಿಚಕ್ರ ವಾಹನ ಸೇರಿದಂತೆ 5,13,200/- ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಖತರ್ನಾಕ್ ಕಳ್ಳನ ವಿರುದ್ದ ಈಗಾಗಲೇ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 40 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.ಚಂದ್ರು.ಆ.ಕಬ್ಬಾಳ್ (35) ಬಂಧಿತ ಆರೋಪಿ.

ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ನಗರದಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನ ಇಬ್ಬರು ಖದೀಮರು ಕಿತ್ತು ಪರಾರಿಯಾಗಿದ್ದರು.

ಪ್ರಕರಣ ದಾಖಲಿಸಿಕೊಂಡ ಸರಸ್ವತಿಪುರಂ ಠಾಣೆ ಪೊಲೀಸರು ಖದೀಮರ ಬಂಧನಕ್ಕೆ ಜಾಲ ಬೀಸಿದ್ದರು.ಖಚಿತ ಮಾಹಿತಿ ಆಧರಿಸಿ ಬೋಗಾದಿ ರಿಂಗ್ ರಸ್ತೆ ಬಳಿ ಆರೋಪಿ ಚಂದ್ರು.ಆ.ಕಬ್ಬಾಳ್ ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತನಿಂದ 2.62 ಲಕ್ಷ ಮೌಲ್ಯದ 43 ಗ್ರಾಂ ಚಿನ್ನದ ಸರ ಹಾಗೂ 2.51 ಲಕ್ಷ ಮೌಲ್ಯದ 4 ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ಮಾರ್ಗದರ್ಶನದಲ್ಲಿ ವಿಜಯನಗರ ಉಪವಿಭಾಗದ ಎಸಿಪಿ ಗಜೇಂದ್ರಪ್ರಸಾದ್ ಉಸ್ತುವಾರಿಯಲ್ಲಿ ಸರಸ್ವತಿಪುರಂ ಠಾಣೆ ಇನ್ಸ್ಪೆಕ್ಟರ್ ಪುರುಷೋತ್ತಮ್ ,ಪಿಎಸ್ಸೈ ರವರಾದ ಲತಾ ಹಾಗೂ ಮಹೇಂದ್ರ ಟಿ ಎಸ್ ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮೋಹನ್ ಕುಮಾರ್,ಕುಮಾರ್,ಸುಧೀಪ್ ಕುಮಾರ್,ರಕ್ಷಿತ್ ಕುಮಾರ್,ಚಂದ್ರಶೇಖರ್,ರಾಜೇಶ್,ಕುಮಾರ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ಹಾಗೂ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *