ಧುಮ್ಮಿಕ್ಕುವ ಜಲಪಾತದಲ್ಲಿ ಬಣ್ಣಬಣ್ಣಗಳ ಬೆಳಕಿನ ನರ್ತನ…ರಂಗುರಂಗಿನ ಚುಂಚನಕಟ್ಟೆ ಜಲಪಾತೋತ್ಸವ ಕಣ್ತುಂಬಿಕೊಂಡ ಸಹಸ್ರಾರು ಮಂದಿ… ಕಣ್ತುಂಬಿಕೊಂಡ

ಧುಮ್ಮಿಕ್ಕುವ ಜಲಪಾತದಲ್ಲಿ ಬಣ್ಣಬಣ್ಣಗಳ ಬೆಳಕಿನ ನರ್ತನ…ರಂಗುರಂಗಿನ ಚುಂಚನಕಟ್ಟೆ ಜಲಪಾತೋತ್ಸವ ಕಣ್ತುಂಬಿಕೊಂಡ ಸಹಸ್ರಾರು ಮಂದಿ… ಕಣ್ತುಂಬಿಕೊಂಡ

ಕೆ.ಆರ್.ನಗರ,ನ30,Tv10 ಕನ್ನಡ

ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ಚುಂಚನಕಟ್ಟೆ ಜಲಪಾತೋತ್ಸವ ಸಹಸ್ರಾರು ಜನರನ್ನ ತನ್ಮತ್ತ ಸೂಜಿಗಲ್ಲಿನಂತೆ

ಆಕರ್ಷಿಸುತ್ತಿದೆ.ಧುಮ್ಮಿಕ್ಕಿ ಹರಿಯುವ ನೀರಿನ ಮೇಲೆ ಬೆಳಕಿನ ನರ್ತನ ಸಾವಿರಾರು ಮಂದಿಯನ್ನ ಸೆಳೆಯುತ್ತಿದೆ.ಜಲಪಾತೋತ್ಸವದಲ್ಲಿ ನಡೆಯುವ ಬೆಳಕಿನ ಚಿತ್ತಾರಗಳನ್ನ ಸವಿಯಲು ಜನಸಾಗರವೇ ಹರಿದುಬಂದಿದೆ.ಕೆ.ಆರ್.ನಗರ ತಾಲೂಕು ಚುಂಚನಕಟ್ಟೆಯಲ್ಲಿ ಎತ್ತ ನೋಡಿದರು ಜಗಮಗಿ ಸುವ ವಿದ್ಯುತ್ ದೀಪಾಲಂಕಾರ, ರಸ ದೌತಣ ನೀಡಲು ಬೃಹತ್ ವೇದಿಕೆ.ಹರಿಯುವ ನೀರಿನಲ್ಲಿ ಕಂಗೊಳಿಸುವ ಲೇಸರ್ ಕಿರಣಗಳು ಮನಸೂರೆಗೊಳ್ಳುವಂತೆ ಮಾಡಿದೆ. ವಿದ್ಯುತ್ ದೀಪಾಲಂಕೃತ ಧನುಷ್ಕೋಟಿಯಲ್ಲಿ ಅಲೆ ಅಲೆಯಾಗಿ ತೇಲಿಬಂದ ಸಂಗೀತ ನಿಸರ್ಗ ಪ್ರೇಮಿಗಳ ಹೃದಯ ಗೆದ್ದಿದೆ.ಜಲಪಾತೋತ್ಸವದ ಮೊದಲನೇ ದಿನವಾದ ಇಂದು ವರ್ಣರಂಜಿತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ರಾಜ್ಯದ ನಾನಾ ಜಿಲ್ಲೆಗಳಿಂದ ಪ್ರವಾಹೋಪಾದಿಯಲ್ಲಿ ಹರಿದು ಬಂದಿದ್ದು ಬೆಳಕಿನ ಸಾಗರದಲ್ಲಿ ಮಿಂದೆದ್ದಿದ್ದಾರೆ.ಜಲಪಾತೋತ್ಸವದ ಬೆಳಕಿನ ಸೊಬಗನ್ನ ಮನಸಾರೆ ಅಸ್ವಾದಿಸುತ್ತಿದ್ದಾರೆ.
ನವ ವಧುವಿನಂತೆ ಸಿಂಗಾರಗೊಂಡಿರುವ ಚುಂಚನಕಟ್ಟೆಯ ಶ್ರೀರಾಮ ದೇವಾಲಯ, ಬಸವನ ವೃತ್ತ ಸೇರಿದಂತೆ ವಿವಿದೆಡೆಗಳಲ್ಲಿ ವಿದ್ಯುತ್ ದೀಪಾಲಂಕಾರ ಜನರನ್ನ ಮಂತ್ರ ಮುಗ್ಧರನ್ನಾಗಿಸಿದೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *