ಹಾಡಿ ನಿವಾಸಿಗಳಿಗೆ ಹೊದಿಕೆ ವಿತರಣೆ…ಆರೋಗ್ಯದ ಬಗ್ಗೆ ಜಾಗೃತಿ..ಕೆ ಎಂ ಪಿ ಕೆ ಟ್ರಸ್ಟ್ ನಿಂದ ಸಾಮಾಜಿಕ ಕಳಕಳಿ…

ಹಾಡಿ ನಿವಾಸಿಗಳಿಗೆ ಹೊದಿಕೆ ವಿತರಣೆ…ಆರೋಗ್ಯದ ಬಗ್ಗೆ ಜಾಗೃತಿ..ಕೆ ಎಂ ಪಿ ಕೆ ಟ್ರಸ್ಟ್ ನಿಂದ ಸಾಮಾಜಿಕ ಕಳಕಳಿ…

ಹೆಚ್.ಡಿ.ಕೋಟೆ,ಡ2,Tv10 ಕನ್ನಡ

ಛಳಿಗಾಲ ಆತಂಭವಾಗಿದೆ.ಇನ್ಮುಂದೆ ಮೈ ಕೊರೆಯುವ ಚಳಿ ಕಾಡಲಿದೆ.ಜೊತೆಗೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.ಛಳಿಗಾಲ ಮುಗಿಯುವ ವರೆಗೂ ಮುನ್ನೆಚ್ಚರಿಕೆ ಅಗತ್ಯ.ಈ ಹಿನ್ನಲೆ ಮೈಸೂರಿನ ಕೆ..ಪಿ.ಕೆ.ಟ್ರಸ್ಟ್ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಮುಂದಾಗಿದೆ.ಜೊತೆಗೆ ಅವಶ್ಯಕತೆ ಇರುವ ಜನರಿಗೆ ಹೊದಿಕೆಗಳನ್ನ ನೀಡುವ ಮೂಲಕ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ.

ಇಂದು ಹೆಚ್.ಡಿ.ಕೋಟೆ ಹಾಡಿ ನಿವಾಸಿಗಳಿಗೆ ಹೋದಿಕೆಗಳನ್ನ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಈ ವೇಳೆ ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್ ಮಾತನಾಡಿ
ಜಿಲ್ಲೆಯಲ್ಲಿ ವ್ಯಾಪಕವಾದ ಛಳಿ ಪ್ರಾರಂಭವಾಗಿದ್ದು, ವಾತಾವರಣದಲ್ಲಿನ ಉಷ್ಣಾಂಶ ಕಡಿಮೆಯಾಗಿ, ತಂಪಾದ ವಾತಾವರಣ ಕಂಡುಬರುತ್ತದೆ. ಈ ಸಂದರ್ಭದಲ್ಲಿ ದೇಹಕ್ಕೆ ವಿವಿಧ ರೀತಿಯ ತೊಂದರೆಗಳಾಗುತ್ತವೆ. ಆದ್ದರಿಂದ ಮುಂಜಾಗ್ರತೆ ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರುಶೀತ, ನೆಗಡಿ, ಜ್ವರ, ಅಜೀರ್ಣ, ಅಲರ್ಜಿಯಂತ ಸಮಸ್ಯೆಗಳು ಕಂಡುಬರುತ್ತದೆ. ಛಳಿಯ ತೀವ್ರತೆಯಿಂದ ರಕ್ತ ಸಂಚಾರದಲ್ಲಿ ತೊಂದರೆಯಾಗುವ ಸಂಭವವಿದ್ದು ಪಾರ್ಶ್ವವಾಯು, ಅಧಿಕ ಮಧುಮೇಹ, ಕಡಿಮೆ ರಕ್ತದೊತ್ತಡ, ಹೃದಯಘಾತಗಳಾಗುವ ಸಂಭವ ಹೆಚ್ಚಾಗಿರುತ್ತದೆ. ಸ್ವಚ್ಚತೆ ಕಾಪಾಡುವುದು, ಜಂಕ್‍ಪುಢಗಳ ಸೇವನೆ ಮಾಡಬೇಡಿ. ಯೋಗ, ಧ್ಯಾನ, ವ್ಯಾಯಾಮ, ನಡಿಗೆಯಂತಹ ದೈಹಿಕ ಚಟುವಟಿಕೆಗಳು ಮಾಡಬೇಕು. ವಿಟಾಮಿನ್-ಡಿ ಹೊಂದಿರುವ ಸೂರ್ಯನ ಬೆಳೆಕು ಪಡೆಯಬೇಕು. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಬಹುದಾಗಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಿ. ನಿಯಮಿತವಾಗಿ ನೀರು ಕುಡಿಯಿರಿ. ಚಳಿಯಲ್ಲಿ ಸುತ್ತಾಟ ಮಾಡುವುದು ಬೇಡ ಎಂದು ಅನೇಕ ಸಲಹೆಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್ ,
ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ , ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಕ್ರಪಾಣಿ, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ಮೋಹನ್ ಕುಮಾರ್ ಗೌಡ, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *