ಹಾಡಿ ನಿವಾಸಿಗಳಿಗೆ ಹೊದಿಕೆ ವಿತರಣೆ…ಆರೋಗ್ಯದ ಬಗ್ಗೆ ಜಾಗೃತಿ..ಕೆ ಎಂ ಪಿ ಕೆ ಟ್ರಸ್ಟ್ ನಿಂದ ಸಾಮಾಜಿಕ ಕಳಕಳಿ…

ಹಾಡಿ ನಿವಾಸಿಗಳಿಗೆ ಹೊದಿಕೆ ವಿತರಣೆ…ಆರೋಗ್ಯದ ಬಗ್ಗೆ ಜಾಗೃತಿ..ಕೆ ಎಂ ಪಿ ಕೆ ಟ್ರಸ್ಟ್ ನಿಂದ ಸಾಮಾಜಿಕ ಕಳಕಳಿ…

ಹೆಚ್.ಡಿ.ಕೋಟೆ,ಡ2,Tv10 ಕನ್ನಡ

ಛಳಿಗಾಲ ಆತಂಭವಾಗಿದೆ.ಇನ್ಮುಂದೆ ಮೈ ಕೊರೆಯುವ ಚಳಿ ಕಾಡಲಿದೆ.ಜೊತೆಗೆ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ.ಛಳಿಗಾಲ ಮುಗಿಯುವ ವರೆಗೂ ಮುನ್ನೆಚ್ಚರಿಕೆ ಅಗತ್ಯ.ಈ ಹಿನ್ನಲೆ ಮೈಸೂರಿನ ಕೆ..ಪಿ.ಕೆ.ಟ್ರಸ್ಟ್ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಅಭಿಯಾನಕ್ಕೆ ಮುಂದಾಗಿದೆ.ಜೊತೆಗೆ ಅವಶ್ಯಕತೆ ಇರುವ ಜನರಿಗೆ ಹೊದಿಕೆಗಳನ್ನ ನೀಡುವ ಮೂಲಕ ಸಾಮಾಜಿಕ ಕಳಕಳಿ ಪ್ರದರ್ಶಿಸಿದೆ.

ಇಂದು ಹೆಚ್.ಡಿ.ಕೋಟೆ ಹಾಡಿ ನಿವಾಸಿಗಳಿಗೆ ಹೋದಿಕೆಗಳನ್ನ ವಿತರಿಸಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದ್ದಾರೆ.

ಈ ವೇಳೆ ಹಿರಿಯ ಪತ್ರಕರ್ತರಾದ ಅನಿಲ್ ಕುಮಾರ್ ಮಾತನಾಡಿ
ಜಿಲ್ಲೆಯಲ್ಲಿ ವ್ಯಾಪಕವಾದ ಛಳಿ ಪ್ರಾರಂಭವಾಗಿದ್ದು, ವಾತಾವರಣದಲ್ಲಿನ ಉಷ್ಣಾಂಶ ಕಡಿಮೆಯಾಗಿ, ತಂಪಾದ ವಾತಾವರಣ ಕಂಡುಬರುತ್ತದೆ. ಈ ಸಂದರ್ಭದಲ್ಲಿ ದೇಹಕ್ಕೆ ವಿವಿಧ ರೀತಿಯ ತೊಂದರೆಗಳಾಗುತ್ತವೆ. ಆದ್ದರಿಂದ ಮುಂಜಾಗ್ರತೆ ತೆಗೆದುಕೊಳ್ಳುವುದು ಅಗತ್ಯವಾಗಿದೆ ಎಂದು ಹೇಳಿದರುಶೀತ, ನೆಗಡಿ, ಜ್ವರ, ಅಜೀರ್ಣ, ಅಲರ್ಜಿಯಂತ ಸಮಸ್ಯೆಗಳು ಕಂಡುಬರುತ್ತದೆ. ಛಳಿಯ ತೀವ್ರತೆಯಿಂದ ರಕ್ತ ಸಂಚಾರದಲ್ಲಿ ತೊಂದರೆಯಾಗುವ ಸಂಭವವಿದ್ದು ಪಾರ್ಶ್ವವಾಯು, ಅಧಿಕ ಮಧುಮೇಹ, ಕಡಿಮೆ ರಕ್ತದೊತ್ತಡ, ಹೃದಯಘಾತಗಳಾಗುವ ಸಂಭವ ಹೆಚ್ಚಾಗಿರುತ್ತದೆ. ಸ್ವಚ್ಚತೆ ಕಾಪಾಡುವುದು, ಜಂಕ್‍ಪುಢಗಳ ಸೇವನೆ ಮಾಡಬೇಡಿ. ಯೋಗ, ಧ್ಯಾನ, ವ್ಯಾಯಾಮ, ನಡಿಗೆಯಂತಹ ದೈಹಿಕ ಚಟುವಟಿಕೆಗಳು ಮಾಡಬೇಕು. ವಿಟಾಮಿನ್-ಡಿ ಹೊಂದಿರುವ ಸೂರ್ಯನ ಬೆಳೆಕು ಪಡೆಯಬೇಕು. ಇದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿರ್ವಹಿಸಬಹುದಾಗಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಿ. ನಿಯಮಿತವಾಗಿ ನೀರು ಕುಡಿಯಿರಿ. ಚಳಿಯಲ್ಲಿ ಸುತ್ತಾಟ ಮಾಡುವುದು ಬೇಡ ಎಂದು ಅನೇಕ ಸಲಹೆಗಳನ್ನು ನೀಡಿದರು.

ಕಾರ್ಯಕ್ರಮದಲ್ಲಿ ಪ್ರಜ್ಞಾವಂತ ನಾಗರಿಕ ವೇದಿಕೆ ಅಧ್ಯಕ್ಷರಾದ ಕಡಕೋಳ ಜಗದೀಶ್ ,
ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ , ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಕ್ರಪಾಣಿ, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ಮೋಹನ್ ಕುಮಾರ್ ಗೌಡ, ಹಾಗೂ ಇನ್ನಿತರರು ಹಾಜರಿದ್ದರು..

Spread the love

Related post

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…

Leave a Reply

Your email address will not be published. Required fields are marked *