ಉದ್ಯೋಗ ಕೊಡಿ…ಉದ್ಯೋಗ ಕೊಡಿ…ಭೂಮಿ ನೀಡಿದ ರೈತರಿಂದ ಕಾರ್ಖಾನೆ ಮುಂಭಾಗ ಪ್ರತಿಭಟನೆ…7 ನೇ ದಿನಕ್ಕೆ ಕಾಲಿಟ್ಟ ಹೋರಾಟ…

ಉದ್ಯೋಗ ಕೊಡಿ…ಉದ್ಯೋಗ ಕೊಡಿ…ಭೂಮಿ ನೀಡಿದ ರೈತರಿಂದ ಕಾರ್ಖಾನೆ ಮುಂಭಾಗ ಪ್ರತಿಭಟನೆ…7 ನೇ ದಿನಕ್ಕೆ ಕಾಲಿಟ್ಟ ಹೋರಾಟ…

ಮೈಸೂರು,ಡಿ2,Tv10 ಕನ್ನಡ

ಕೈಗಾರಿಕೆಗಳ ಅಭಿವೃದ್ದಿಗಾಗಿ ವರುಣ ಕ್ಷೇತ್ರದ ಕೆಂಪಿಸಿದ್ದನಹುಂಡಿ ರೈತರು 15 ವರ್ಷಗಳ ಹಿಂದೆ ಭೂಮಿ ನೀಡಿದ್ದರು.ಬದಲಾಗಿ ಉದ್ಯೋಗ ನೀಡುವ ಭರವಸೆ ನೀಡಿದ್ದರು.ವರ್ಷಗಳು ಉರುಳುತ್ತಿದ್ದರೂ ಕಾರ್ಖಾನೆಗಳು ಅಸ್ತಿತ್ವಕ್ಕೆ ಬರುತ್ತಿದೆ ಹೊರತು ಭೂಮಿ ನೀಡಿದ ರೈತ ಕುಟುಂಬಗಳಿಗೆ ಉದ್ಯೋಗ ನೀಡಿಲ್ಲ.ಈ ಬಗ್ಗೆ ಹಲವಾರು ಹೋರಾಟಗಳು ನಡೆದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ.ಈ ಹಿನ್ನಲೆ ಉದ್ಯೋಗ ನೀಡದ ಕಾರ್ಖಾನೆಗಳ ವಿರುದ್ದ ಸಿಡಿದೆದ್ದಿದ್ದಾರೆ.ಅಹೋರಾತ್ರಿ ಮುಷ್ಕರ ಕೈಗೊಂಡಿದ್ದಾರೆ.ಮುಷ್ಕರ 7 ನೇ ದಿನಕ್ಕೆ ಕಾಲಿಟ್ಟಿದೆ.
ಸಿಎಂ ತವರು ಜಿಲ್ಲೆಯ ವರುಣ ಕ್ಷೇತ್ರದ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಅನ್ಯಾಯವಾಗಿದೆ. ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಯುತ್ತಿದೆ.
ಭೂಮಿಯನ್ನು ಕಳೆದುಕೊಂಡ ರೈತ ಕುಟುಂಬಗಳ ಜೀವನ ದುಸ್ಥರವಾಗಿದೆ. 7 ದಿನಗಳಿಂದ ಮೈಸೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಮುಂದೆ ರೈತರು, ರೈತ ಮಹಿಳೆಯರು, ರೈತ ಮಕ್ಕಳು, ವಯಸ್ಸಾದ ವೃದ್ಧರು ತಮ್ಮ ಜಾನುವಾರು, ಕೆಲಸ, ಕೂಲಿಯನ್ನು ಬಿಟ್ಟು ಹಗಲು ರಾತ್ರಿ, ಬಿಸಿಲು, ಮಳೆ, ಕೊರೆಯುವ ಚಳಿಯಲ್ಲಿ ತಮ್ಮ ಕುಟುಂಬಗಳಿಗೆ ಅಹೋರಾತ್ರಿ ಹೋರಾಟ ಮಾಡುತ್ತಿದ್ದಾರೆ.ಜಿಲ್ಲಾ ಆಡಳಿತವಾಗಲಿ, ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯರವರಾಗಲಿ ಇದರ ಬಗ್ಗೆ ಗಮನಹರಿಸಿಲ್ಲ. ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಬಿಟ್ಟು ನಾವು ಹಿಂದಿರುಗುವುದಿಲ್ಲ ಎಂಬ ದೃಢ ನಿರ್ಧಾರದಿಂದ ರೈತರು ಹೋರಾಟವನ್ನು ಮುಂದುವರಿಸಿದ್ದಾರೆ.

ಹೋರಾಟದ ನೇತೃತ್ವವನ್ನು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ವಹಿಸಿದೆ. ರೈತನಾಯಕರಾದ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಜನಾಂದೋಲನಗಳ ಮಹಾ ಮೈತ್ರಿಯ ರಾಜ್ಯ ನಾಯಕರಾದ ಉಗ್ರನರಸಿಂಹೇಗೌಡರು, ಎಐಕೆಕೆಎಂಎಸ್ ಜಿಲ್ಲಾ ಸಂಚಾಲಕರಾದ ಬಸವರಾಜು ಎಚ್.ಎಂ. ರವರು ಹಾಗೂ ಕೆಂಪಿಸಿದ್ದನಹುಂಡಿಯ ರೈತರಾದ ಉಮೇಶ್, ಮಂಜು, ರವಿಕುಮಾರ್‌ ಕೆ.ಕೆ, ಚಂದ್ರು, ಹೂವಮ್ಮ, ಜಯಲಕ್ಷ್ಮಿಮ್ಮ, ಮಲ್ಲಿಗಮ್ಮ, ನಾಗರತ್ನಮ್ಮ, ಸೌಭಾಗ್ಯ, ನಾಗಮ್ಮ ಸೇರಿದಂತೆ ಹಲವಾರು ರೈತರು ಭಗವಹಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *