ಉದ್ಯೋಗ ಕೊಡಿ…ಉದ್ಯೋಗ ಕೊಡಿ…ಭೂಮಿ ನೀಡಿದ ರೈತರಿಂದ ಕಾರ್ಖಾನೆ ಮುಂಭಾಗ ಪ್ರತಿಭಟನೆ…7 ನೇ ದಿನಕ್ಕೆ ಕಾಲಿಟ್ಟ ಹೋರಾಟ…

ಉದ್ಯೋಗ ಕೊಡಿ…ಉದ್ಯೋಗ ಕೊಡಿ…ಭೂಮಿ ನೀಡಿದ ರೈತರಿಂದ ಕಾರ್ಖಾನೆ ಮುಂಭಾಗ ಪ್ರತಿಭಟನೆ…7 ನೇ ದಿನಕ್ಕೆ ಕಾಲಿಟ್ಟ ಹೋರಾಟ…

ಮೈಸೂರು,ಡಿ2,Tv10 ಕನ್ನಡ

ಕೈಗಾರಿಕೆಗಳ ಅಭಿವೃದ್ದಿಗಾಗಿ ವರುಣ ಕ್ಷೇತ್ರದ ಕೆಂಪಿಸಿದ್ದನಹುಂಡಿ ರೈತರು 15 ವರ್ಷಗಳ ಹಿಂದೆ ಭೂಮಿ ನೀಡಿದ್ದರು.ಬದಲಾಗಿ ಉದ್ಯೋಗ ನೀಡುವ ಭರವಸೆ ನೀಡಿದ್ದರು.ವರ್ಷಗಳು ಉರುಳುತ್ತಿದ್ದರೂ ಕಾರ್ಖಾನೆಗಳು ಅಸ್ತಿತ್ವಕ್ಕೆ ಬರುತ್ತಿದೆ ಹೊರತು ಭೂಮಿ ನೀಡಿದ ರೈತ ಕುಟುಂಬಗಳಿಗೆ ಉದ್ಯೋಗ ನೀಡಿಲ್ಲ.ಈ ಬಗ್ಗೆ ಹಲವಾರು ಹೋರಾಟಗಳು ನಡೆದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ.ಈ ಹಿನ್ನಲೆ ಉದ್ಯೋಗ ನೀಡದ ಕಾರ್ಖಾನೆಗಳ ವಿರುದ್ದ ಸಿಡಿದೆದ್ದಿದ್ದಾರೆ.ಅಹೋರಾತ್ರಿ ಮುಷ್ಕರ ಕೈಗೊಂಡಿದ್ದಾರೆ.ಮುಷ್ಕರ 7 ನೇ ದಿನಕ್ಕೆ ಕಾಲಿಟ್ಟಿದೆ.
ಸಿಎಂ ತವರು ಜಿಲ್ಲೆಯ ವರುಣ ಕ್ಷೇತ್ರದ ಭೂಮಿ ಕಳೆದುಕೊಂಡ ರೈತ ಕುಟುಂಬಗಳಿಗೆ ಅನ್ಯಾಯವಾಗಿದೆ. ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಯುತ್ತಿದೆ.
ಭೂಮಿಯನ್ನು ಕಳೆದುಕೊಂಡ ರೈತ ಕುಟುಂಬಗಳ ಜೀವನ ದುಸ್ಥರವಾಗಿದೆ. 7 ದಿನಗಳಿಂದ ಮೈಸೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಮುಂದೆ ರೈತರು, ರೈತ ಮಹಿಳೆಯರು, ರೈತ ಮಕ್ಕಳು, ವಯಸ್ಸಾದ ವೃದ್ಧರು ತಮ್ಮ ಜಾನುವಾರು, ಕೆಲಸ, ಕೂಲಿಯನ್ನು ಬಿಟ್ಟು ಹಗಲು ರಾತ್ರಿ, ಬಿಸಿಲು, ಮಳೆ, ಕೊರೆಯುವ ಚಳಿಯಲ್ಲಿ ತಮ್ಮ ಕುಟುಂಬಗಳಿಗೆ ಅಹೋರಾತ್ರಿ ಹೋರಾಟ ಮಾಡುತ್ತಿದ್ದಾರೆ.ಜಿಲ್ಲಾ ಆಡಳಿತವಾಗಲಿ, ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯರವರಾಗಲಿ ಇದರ ಬಗ್ಗೆ ಗಮನಹರಿಸಿಲ್ಲ. ನಮಗೆ ನ್ಯಾಯ ಸಿಗುವವರೆಗೂ ಹೋರಾಟ ಬಿಟ್ಟು ನಾವು ಹಿಂದಿರುಗುವುದಿಲ್ಲ ಎಂಬ ದೃಢ ನಿರ್ಧಾರದಿಂದ ರೈತರು ಹೋರಾಟವನ್ನು ಮುಂದುವರಿಸಿದ್ದಾರೆ.

ಹೋರಾಟದ ನೇತೃತ್ವವನ್ನು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ (ಎಐಕೆಕೆಎಂಎಸ್) ವಹಿಸಿದೆ. ರೈತನಾಯಕರಾದ ಬೊಕ್ಕಹಳ್ಳಿ ನಂಜುಂಡಸ್ವಾಮಿ, ಜನಾಂದೋಲನಗಳ ಮಹಾ ಮೈತ್ರಿಯ ರಾಜ್ಯ ನಾಯಕರಾದ ಉಗ್ರನರಸಿಂಹೇಗೌಡರು, ಎಐಕೆಕೆಎಂಎಸ್ ಜಿಲ್ಲಾ ಸಂಚಾಲಕರಾದ ಬಸವರಾಜು ಎಚ್.ಎಂ. ರವರು ಹಾಗೂ ಕೆಂಪಿಸಿದ್ದನಹುಂಡಿಯ ರೈತರಾದ ಉಮೇಶ್, ಮಂಜು, ರವಿಕುಮಾರ್‌ ಕೆ.ಕೆ, ಚಂದ್ರು, ಹೂವಮ್ಮ, ಜಯಲಕ್ಷ್ಮಿಮ್ಮ, ಮಲ್ಲಿಗಮ್ಮ, ನಾಗರತ್ನಮ್ಮ, ಸೌಭಾಗ್ಯ, ನಾಗಮ್ಮ ಸೇರಿದಂತೆ ಹಲವಾರು ರೈತರು ಭಗವಹಿಸಿದ್ದಾರೆ…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *