ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ಸರಗಳ್ಳಿಯ ಬಂಧನ…3.90 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಲಷ್ಕರ್ ಠಾಣೆ ಪೊಲೀಸರ ಕಾರ್ಯಾಚರಣೆ…ಸರಗಳ್ಳಿಯ ಬಂಧನ…3.90 ಲಕ್ಷ ಮೌಲ್ಯದ ಚಿನ್ನದ ಸರ ವಶ…

ಮೈಸೂರು,ಡಿ6,Tv10 ಕನ್ನಡ

ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮಹಿಳೆಯರ ಚಿನ್ನದ ಸರ ಕಳುವು ಮಾಡುತ್ತಿದ್ದ ಸರಗಳ್ಳಿಯನ್ನ ಬಂಧಿಸುವಲ್ಲಿ ಲಷ್ಕರ್ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತಳಿಂದ 3.90 ಲಕ್ಷ ಮೌಲ್ಯದ ಒಟ್ಟು 54 ಗ್ರಾಂ ತೂಕದ ಎರಡು ಚಿನ್ನದ ಸರಗಳನ್ನ ವಶಪಡಿಸಿಕೊಂಡಿದ್ದಾರೆ.ಕೆ.ಆರ್.ನಗರ ಮೂಲದ ಲತಾ ಸಿಕ್ಕಿಬಿದ್ದ ಸರಗಳ್ಳಿ.

ಇತ್ತೀಚೆಗೆ ಗ್ರಾಮಾಂತರ ಬಸ್ ನಿಲ್ದಾಣದಲ್ಲಿ ಮಹಿಳೆಯರ ಸರಗಳ್ಳತನ ಪ್ರಕರಣ ನಡೆದಿತ್ತು.ಆರೋಪಿಯ ಬಂಧನಕ್ಕೆ ಲಷ್ಕರ್ ಠಾಣೆ ಪೊಲೀಸರು ತಂಡ ರಚಿಸಿದ್ದರು.ಗ್ರಾಮಾಂತರ ಬಸ್ ನಿಲ್ದಾಣದಲ್ಲೇ ಸಿಕ್ಕಿಬಿದ್ದ ಆರೋಪಿ ಲತಾಳನ್ನ ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಸರಗಳುವು ಮಾಡಿರುವುದಾಗಿ ಒಪ್ಪಿಕೊಂಡಿದ್ದಳು.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ರವರ ಉಸ್ತುವಾರಿಯಲ್ಲಿ ಲಷ್ಕರ್ ಠಾಣೆಯ ಇನ್ಸ್ಪೆಕ್ಟರ್ ಪ್ರಸಾದ್ ಕೆ.ಆರ್. ಪಿಎಸ್ಸೈ ಗಳಾದ ಕು.ರಾಧಾ,ಅನಿಲ್ ಕುಮಾರ್ ನೇತೃತ್ವದಲ್ಲಿ ಎಎಸ್ಸೈ ಲೋಕೇಶ್ ಸಿಬ್ಬಂದಿಗಳಾದ ಸುರೇಶ್,ರವಿಕುಮಾರ್,ಗಿರೀಶ್,ಮಂಜುನಾಥ್,ಚೌಡಪ್ಪ ಪಾಸೀಗರ್,ಅಬ್ದುಲ್ ರೆಹಮಾನ್,ಚಿಕ್ಕಣ್ಣ ಸ್ವಾಮಿ,ಅಶ್ವಿನಿ ಹಳವಾರ ರವರು ಆರೋಪಿಯ ಬಂಧನ ಕಾರ್ಯಾಚರಣೆ ಯಶಸ್ವಿಗೊಳಿಸಿದ್ದಾರೆ.

ಕಾರ್ಯಾಚರಣೆಯನ್ನ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಮುತ್ತುರಾಜ್ ,ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರವರು ಶ್ಲಾಘಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *