ಸುಭ್ರಹ್ಮಣ್ಯ ಷಷ್ಠಿ…ಸಿದ್ದಿಲಿಂಗಪುರ ದೇವಾಲಯದಲ್ಲಿ ವಿಶೇಷ ಪೂಜೆ…ಹರಿದು ಬಂದ ಭಕ್ತಸಾಗರ…

ಸುಭ್ರಹ್ಮಣ್ಯ ಷಷ್ಠಿ…ಸಿದ್ದಿಲಿಂಗಪುರ ದೇವಾಲಯದಲ್ಲಿ ವಿಶೇಷ ಪೂಜೆ…ಹರಿದು ಬಂದ ಭಕ್ತಸಾಗರ…

ಮೈಸೂರು,ಡಿ7,Tv10 ಕನ್ನಡ

ಮೈಸೂರು-ಬೆಂಗಳೂರು ರಸ್ತೆಯಲ್ಲಿರುವ ಸಿದ್ದಲಿಂಗಪುರದಲ್ಲಿನ ಸುಬ್ರಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಇಂದು ವಿಶೇಷ ಪೂಜಾ ಕೈಂಕರ್ಯಗಳನ್ನು ವಿಜೃಂಭಣೆಯಿಂದ ನೆರವೇರಿಸಲಾಯಿತು.
ಷಷ್ಠಿ ಪ್ರಯುಕ್ತ ಸುಬ್ರಮಣ್ಯೇಶ್ವರ ಸ್ವಾಮಿಗೆ ಇಂದು ಮುಂಜಾನೆ ಶುದ್ಧೋದಕ ಸ್ನಾನ, ಪಂಚಾಮೃತ ಅಭಿಷೇಕ, ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ ನೆರವೇರಿಸಿ ನಂತರ ಸುಬ್ರಮಣ್ಯೇಶ್ವರ ಸ್ವಾಮಿಗೆ ಮೈಸೂರು ಅರಸರು ನೀಡಿದ ನಾಗಾಭರಣವನ್ನು ಧಧಾರಣೆ ಮಾಡಲಾಯಿತು.
ಆನಂತರ ದೇವರಿಗೆ ಅಷ್ಟೋತ್ತರ, ಸಹಸ್ರನಾಮ, ಅಷ್ಟಾವಧಾನ ಸೇವೆಯನ್ನು ನೆರವೇರಿಸಿ ಮಹಾಮಂಗಳಾರತಿ ಮಾಡಿ ಭಕ್ತಾದಿಗಳಿಗೆ 3:30ರ ನಂತರ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಇಂದು ದೇವಾಲಯಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಪೂಜೆ ನಂತರ ತೀರ್ಥ, ಪ್ರಸಾದವನ್ನು ನೀಡಲಾಯಿತು.
ಷಷ್ಠಿ ವಿಶೇಷ ಪೂಜೆ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ದೇವರ ದರ್ಶನಕ್ಕಾಗಿ ಭಕ್ತಾದಿಗಳಿಗೆ ದೇವಾಲಯದ ಸುತ್ತಲೂ ಬ್ಯಾರಿಕೇಡ್ ಹಾಕಿ ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿತ್ತು.
ದೇವಾಲಯಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಆಗಮಿಸಿ ದೇವರ ದರುಶನ ಪಡೆದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಹಿನ್ನೆಲೆ ಮೈಸೂರು-ಬೆಂಗಳೂರು ದೇವಾಲಯದ ಮುಂಭಾಗದಲ್ಲಿನ ಎಲ್ಲಾ ಸರ್ವಿಸ್ ರಸ್ತೆಗಳನ್ನು ಬಂದು ಮಾಡಲಾಗಿತ್ತು.
ದೇವಾಲಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *