ಸಾಲದ ಹಣಕ್ಕಾಗಿ ಸಹದ್ಯೋಗಿಯಿಂದ ಕಿರುಕುಳ…ನಾಲೆಯಲ್ಲಿ KSRTC ಬಸ್ ಕಂಡಕ್ಟರ್ ಶವ ಪತ್ತೆ…ಕೊಲೆಯೋ…? ಆತ್ಮಹತ್ಯೆಯೋ…?

ಸಾಲದ ಹಣಕ್ಕಾಗಿ ಸಹದ್ಯೋಗಿಯಿಂದ ಕಿರುಕುಳ…ನಾಲೆಯಲ್ಲಿ KSRTC ಬಸ್ ಕಂಡಕ್ಟರ್ ಶವ ಪತ್ತೆ…ಕೊಲೆಯೋ…? ಆತ್ಮಹತ್ಯೆಯೋ…?

ಮೈಸೂರು,ಡಿ7,Tv10 ಕನ್ನಡ

ಸಲದ ಹಣ ವಸೂಲಿಗಾಗಿ ಸಹದ್ಯೋಗಿ ನೀಡಿದ ಕಿರುಕುಳಕ್ಕೆ ಬೇಸತ್ತ ಕೆ.ಎಸ್.ಆರ್.ಟಿ.ಸಿ.ಬಸ್ ಕಂಡಕ್ಟರ್ ಮನೆ ಬಿಟ್ಟ ಹತ್ತು ದಿನಗಳ ನಂತರ ವರುಣಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.ಬಸ್ ಕಂಡಕ್ಟರ್ ಸಾವಿನ ಸುತ್ತ ಅನುಮಾನದ ಹುತ್ತ ನಿರ್ಮಾಣವಾಗಿದೆ.ಸಾವು ಆತ್ಮಹತ್ಯೆಯೋ..? ಕೊಲೆಯೋ…? ಪೊಲೀಸರ ತೆನಿಖೆಯಲ್ಲಿ ಖಚಿತವಾಗಬೇಕಿದೆ.

ಕುವೆಂಪುನಗರ ಬಸ್ ಡಿಪೋದಲ್ಲಿ ಕಂಡಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಕಾಂತ ಯಲ್ಲಪ್ಪ ಅನುಮಾನಾಸ್ಪದವಾಗಿ ಮೃತಪಟ್ಟವರು.ಸಧ್ಯ ಈತನ ಸಾವಿಗೆ ಕಾರಣವಾಗಿರುವ ಸಹದ್ಯೋಗಿ ಗುರುರಾಜ ಉಪಾಸ ಹಾಗೂ ಇವರ ಸ್ನೇಹಿತ ಸುಭಾಷ್ ವಿರುದ್ದ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶ್ರೀಕಾಂತ್ ಯಲ್ಲಪ್ಪ ರವರು ತಮ್ಮ ವಿಕಲಚೇತನ ಮಗನ ಚಿಕಿತ್ಸೆಗಾಗಿ ಸಹದ್ಯೋಗಿ ಗುರುರಾಜ್ ಉಪಾಸ ಬಳಿ 3 ಲಕ್ಷ ಸಾಲ ಪಡೆದಿದ್ದರು.ಶೇ 5 % ಬಡ್ಡಿ ಹಣ ಕಟ್ಟುತ್ತಿದ್ದರು.ಸುಮಾರು ತಿಂಗಳು ಬಡ್ಡಿ ಹಣ ಕಟ್ಟಿದ್ದಾರೆ.ಈ ಮಧ್ಯೆ ಅಸಲು ಹಣ ತೀರಿಸುವಂತೆ ಗುರುರಾಜ್ ಉಪಾಸ ಪಟ್ಟು ಹಿಡಿದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.ಹಣ ತೀರಿಸದಿದ್ದರೆ ನೀನು ಸಾಯುವುದೇ ಮೇಲು ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ.ಈ ವೇಳೆ ಸಂಭಂಧಿಕರೊಬ್ಬರು 2 ಲಕ್ಷ ಪಾವತಿಸಿ ಉಳಿದ ಹಣಕ್ಕೆ ಸಮಯ ಪಡೆದಿದ್ದರು.ಮತ್ತೆ 5 ಲಕ್ಷ ಹಣ ನೀಡುವಂತೆ ಪೀಡಿಸಿದ್ದಾರೆ.ಆಗಾಗ ಮನೆಗೆ ಬರುತ್ತಿದ್ದ ಗುರುರಾಜ್ ಉಪಾಸ ಹಣಕ್ಕಾಗಿ ಮಾನಸಿಕವಾಗಿ ಹಿಂಸಿಸಿ ನಿಂದಿಸಿದ್ದಾರೆ.ಇದರಿಂದ ಬೇಸತ್ತ ಶ್ರೀಕಾಂತ್ ಯಲ್ಲಪ್ಪ ಮನೆ ಬಿಟ್ಟವರು ಕೆಲಸಕ್ಕೂ ಹೋಗಿಲ್ಲ.ಮನೆಗೂ ಹಿಂದಿರುಗಿಲ್ಲ. 10 ದಿನಗಳ ನಂತರ ಶ್ರೀಕಾಂತ್ ಯಲ್ಲಪ್ಪ ರವರ ಮೃತದೇಹ ಕಿರಾಳು ಗ್ರಾಮದ ವರುಣಾ ಉಪನಾಲೆಯಲ್ಲಿ ದೊರೆತಿದೆ.ಗುರುರಾಜ ಉಪಾಸ ರವರ ಕಿರುಕುಳಕ್ಕೆ ಬೆಸತ್ತು ಮನೆ ಬಿಟ್ಟ ಶ್ರೀಕಾಂತ ಯಲ್ಲಪ್ಪ ಸಾವಿನ ಹಿಂದೆ ಅನುಮಾನದ ಹುತ್ತ ಎದ್ದಿದೆ.ಮನೆ ಬಿಡುವ ಮುನ್ನ ಶ್ರೀಕಾಂತ ಯಲ್ಲಪ್ಪ ಡೆತ್ ನೋಟ್ ಬರೆದು ಹೊರಟಿದ್ದಾರೆ.ಮೃತಪಟ್ಟ ಕೆಲವು ದಿನಗಳ ನಂತರ ಡೆತ್ ನೋಟ್ ಮನೆಯವರಿಗೆ ದೊರೆತಿದೆ.ಇದರಲ್ಲಿ ಗುರುರಾಜ್ ಉಪಾಸ ಹೆಸರು ಉಲ್ಲೇಖಿಸಿದ್ದಾರೆ. ನಾನು ಹೆಚ್ಚುಕಮ್ಮಿ ಮಾಡಿಕೊಂಡರೆ ಗುರುರಾಜ್ ಉಪಾಸ ಕಾರಣ ಎಂದು ಬರೆದಿದ್ದಾರೆ.ಮರಣೋತ್ತರ ಪರೀಕ್ಷೆಯಲ್ಲಿ ಮಧ್ಯಪಾನದ ಜೊತೆಗೆ ವಿಷ ಬೆರೆಸಲಾಗಿರುವುದು ಪತ್ತೆಯಾಗಿದೆ.ವಿಷ ಬೆರೆಸಿ ಕುಡಿದಿದ್ದರೆ ನೀರಿನಲ್ಲಿ ಮೃತದೇಹ ಪತ್ತೆಯಾಗಿದ್ದು ಹೇಗೆ..? ಆತ್ಮಹತ್ಯೆ ಮಾಡಿಕೊಳ್ಳುವಂತಿದ್ದರೆ ವಿಷ ಸೇವಿಸಿ ಮನೆಯಲ್ಲೇ ಮಾಡಿಕೊಳ್ಳಬಹುದಿತ್ತು ಎಂಬುದು ಮನೆಯವರ ವಾದ.ಶ್ರೀಕಾಂತ ಯಲ್ಲಪ್ಪ ರವರ ಸಾವು ಅನುಮಾನ ಮೂಡಿಸುತ್ತಿದೆ.ವರುಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ನ್ಯಾಯಾಲಯದ ಆದೇಶದಂತೆ ಉದಯಗಿರಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.ಹಣಕ್ಕಾಗಿ ಪೀಡಿಸಿದ ಗುರುರಾಜ ಉಪಾಸ ರನ್ನ ಪೊಲೀಸರು ತೀವ್ರ ವಿಚಾರಣೆ ನಡೆಸಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *