
ಮೈಸೂರು-ಬೆಂಗಳೂರು ಹೆದ್ದಾರಿ ರಿಂಗ್ ರಸ್ತೆ ಜಂಕ್ಷನ್ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಅಸ್ತು…ಶೀಘ್ರದಲ್ಲೇ ಟಿಂಡರ್ ಪ್ರಕ್ರಿಯೆ…ಸಂಸದ ಯದುವೀರ್…
- TV10 Kannada Exclusive
- December 7, 2024
- No Comment
- 68
ಮೈಸೂರು,ಡಿ7,Tv10 ಕನ್ನಡ
ಮೈಸೂರು-ಬೆಂಗಳೂರು ಹೈವೇಯ ಕೆಂಪೇಗೌಡ ವೃತ್ತದ ಬಳಿ (ಮಣಿಪಾಲ್ ಆಸ್ಪತ್ರೆ ಬಳಿ) ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅನುಮೋದನೆ ನೀಡಿದ್ದಾರೆ.ಶೀಘ್ರದಲ್ಲೇ ಇದಕ್ಕೆ ಟೆಂಡರ್ ಕರೆಯಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಮೈಸೂರು-ಬೆಂಗಳೂರು ಹೈವೇಯಲ್ಲಿ ಬರುವ ಪ್ರಮುಖ ಪಟ್ಟಣಗಳಿಗೆ ಹೋಗಲು ಟೋಲ್ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.
ಹೈವೇಯ ಎರಡು ಕಡೆ ಅಂಡರ್ ಪಾಸ್ ನಿರ್ಮಾಣ ಮಾಡಲಾಗುತ್ತದೆ.
ಸುಮಾರು 711 ಕೋಟಿ ಅಂದಾಜು ವೆಚ್ಚದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎಂದರು.
ಮೂಡ ಹಗರಣ ಕುರಿತು ಸಂಸತ್ ನಲ್ಲಿ ಚರ್ಚಿಸಲಾಗಿದೆ.
ಈ ಹಿಂದೆ ಸಂಸತ್ ನಲ್ಲಿ ಈ ವಿಚಾರ ಪ್ರಸ್ತಾಪ ಮಾಡಲಾಗಿತ್ತು.
ಈ ಬಾರಿಯು ಕೂಡ ಚರ್ಚಿಸುತ್ತೇವೆ.
ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೂ ಈ ಕುರಿತು ಮಾತನಾಡುತ್ತೇವೆ.
ಕೇವಲ ಮೂಡ ಹಗರಣ ಅಷ್ಟೇ ಅಲ್ಲ ವಾಲ್ಮೀಕಿ ಹಗರಣದ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣಕ್ಕೆ ಪ್ರತಿಕ್ರಿಯಿಸಿ
ಈ ಕುರಿತು ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜೀನಾಮೆ ಕೊಡಬೇಕು.
ಬಾಣಂತಿಯರ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು.
ಪ್ರಕರಣದ ಕುರಿತು ನಮ್ಮ ನಾಯಕರ ಹೋರಾಟಕ್ಕೆ ನಾನು ಜೊತೆಯಾಗಿ ನಿಲ್ಲುತ್ತೇನೆ ಎಂದರು…