ಮದುವೆ ಆಗುವಂತೆ ಇನ್ಫೋಸಿಸ್ ಉದ್ಯೋಗಿಗೆ ಟಾರ್ಚರ್…ಮನೆಗೆ ನುಗ್ಗಿ ರಂಪಾಟ,ಕೊಲೆ ಬೆದರಿಕೆ…ಯುವಕನ ವಿರುದ್ದ FIR ದಾಖಲು

ಮದುವೆ ಆಗುವಂತೆ ಇನ್ಫೋಸಿಸ್ ಉದ್ಯೋಗಿಗೆ ಟಾರ್ಚರ್…ಮನೆಗೆ ನುಗ್ಗಿ ರಂಪಾಟ,ಕೊಲೆ ಬೆದರಿಕೆ…ಯುವಕನ ವಿರುದ್ದ FIR ದಾಖಲು

ಮೈಸೂರು,ಡಿ9,Tv10 ಕನ್ನಡ

ಮದುವೆ ಆಗುವಂತೆ ಒತ್ತಾಯಿಸಿದ ಯುವಕನೊಬ್ಬ ಇನ್ಫೋಸಿಸ್ ಉದ್ಯೋಗಿಯ ಮನೆಗೆ ನುಗ್ಗಿ ಹಲ್ಲೆ ನಡೆಸಿ ರಂಪಾಟ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆ ಮೈಸೂರಿನ ಮೇಟಗಳ್ಳಿ ಠಾಣೆ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದಿದೆ.ಟಾರ್ಚರ್ ನೀಡಿ ಹಲ್ಲೆ ನಡೆಸಿದ ಯುವಕನ ವಿರುದ್ದ ಇನ್ಫೋಸಿಸ್ ಉದ್ಯೋಗಿ ಕಾನೂನು ಕ್ರಮ ಕೈಗೊಳ್ಳುವಂತೆ FIR ದಾಖಲಿಸಿದ್ದಾರೆ.

ಇನ್ಫೋಸಿಸ್ ನಲ್ಲಿ ಟೆಕ್ನಿಕಲ್ ಸಪೋರ್ಟ್ ಸ್ಪೆಷಲಿಸ್ಟ್ ಆಗಿ ಕೆಲಸ ಮಾಡುತ್ತಿರುವ ಇಂದು ಎಂಬುವರು ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಬೆಂಗಳೂರಿನ ಕೆಂಗೇರಿಯ ಸುಂಕಲ್ ಪಾಳ್ಯ ನಿವಾಸಿ ಮಧುನಂದನ್ ವಿರುದ್ದ ಪ್ರಕರಣ ದಾಖಲಾಗಿದೆ.

ಇಂದು ಹಾಗೂ ಮಧುನಂದನ್ ರವರ ಮದುವೆಗೆ ಜೂನ್ ತಿಂಗಳಿನಲ್ಲಿ ಮಾತುಕತೆ ಆಗಿತ್ತು.ನಂತರದ ದಿನಗಳಲ್ಲಿ ಇಂದು ವಿಚಾರದಲ್ಲಿ ಅನಗತ್ಯವಾಗಿ ಸಂಶಯಪಡುವುದು,ನೀನು ವರ್ಜಿನಾ..?,ಫೋನ್ ಮಾಡಿದ್ರೆ ಯಾಕೆ ರಿಸೀವ್ ಮಾಡಿಲ್ಲ,ಎಲ್ಲಿಗೆ ಹೋಗಿದ್ದೆ ಹೀಗೆ ಪ್ರಶ್ನೆಗಳನ್ನ ಹಾಕಿ ಮಧುನಂದನ್ ಅನುಮಾನ ವ್ಯಕ್ತಪಡಿಸುತ್ತಿದ್ದ.ಇದರಿಂದ ಮನನೊಂದ ಇಂದು ತನ್ನ ಮನೆಯವರೊಂದಿಗೆ ಚರ್ಚಿಸಿ ಮದುವೆ ರದ್ದು ಮಾಡಿಕೊಂಡರು.ಇದರಿಂದ ದ್ವೇಷ ಬೆಳೆಸಿಕೊಂಡ ಮಧುನಂದನ್ ತನ್ನ ಅಕ್ಕ ಸರಿತಾ,ಅಕ್ಕನ ಮಗ ಚಿರು,ಭಾವ ಯೋಗೇಶ್ ಜೊತೆ ಮನೆಗೆ ಪ್ರವೇಶಿಸಿ ಮದುವೆ ಆಗುವಂತೆ ಪೀಡಿಸಿದ್ದಾನೆ.ಇದನ್ನ ನಿರಾಕರಿಸಿದಾಗ ಇಂದು ಮೇಲೆ ಹಲ್ಲೆ ನಡೆಸಿದ್ದಾನೆ.ಅಡ್ಡ ಬಂದ ತಂಗಿ ಮೇಲೂ ಹಲ್ಲೆ ನಡೆಸಿ ರಂಪಾಟ ಮಾಡಿದ್ದಾನೆ.ನನ್ನನ್ನ ಮದುವೆ ಆಗದಿದ್ದರೆ ಯಾರು ಮದುವೆ ಆಗದಂತೆ ಮಾಡುವುದಾಗಿ ಹೆದರಿಸಿ ಕೊಲೆ ಬೆದರಿಕೆ ಹಾಕಿದ್ದಾನೆ.ಮಧುನಂದನ್ ರಿಂದ ಹಲ್ಲೆಗೊಳಗಾದ ಇಂದು ಹಾಗೂ ಮನೆಯವರು ಚಿಕಿತ್ಸೆ ಪಡೆದು ನಂತರ ಆತನ ವಿರುದ್ದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…

Leave a Reply

Your email address will not be published. Required fields are marked *