ಮದುವೆ ಆಗುವಂತೆ ಇನ್ಫೋಸಿಸ್ ಉದ್ಯೋಗಿಗೆ ಟಾರ್ಚರ್…ಮನೆಗೆ ನುಗ್ಗಿ ರಂಪಾಟ,ಕೊಲೆ ಬೆದರಿಕೆ…ಯುವಕನ ವಿರುದ್ದ FIR ದಾಖಲು

ಮದುವೆ ಆಗುವಂತೆ ಇನ್ಫೋಸಿಸ್ ಉದ್ಯೋಗಿಗೆ ಟಾರ್ಚರ್…ಮನೆಗೆ ನುಗ್ಗಿ ರಂಪಾಟ,ಕೊಲೆ ಬೆದರಿಕೆ…ಯುವಕನ ವಿರುದ್ದ FIR ದಾಖಲು

ಮೈಸೂರು,ಡಿ9,Tv10 ಕನ್ನಡ

ಮದುವೆ ಆಗುವಂತೆ ಒತ್ತಾಯಿಸಿದ ಯುವಕನೊಬ್ಬ ಇನ್ಫೋಸಿಸ್ ಉದ್ಯೋಗಿಯ ಮನೆಗೆ ನುಗ್ಗಿ ಹಲ್ಲೆ ನಡೆಸಿ ರಂಪಾಟ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆ ಮೈಸೂರಿನ ಮೇಟಗಳ್ಳಿ ಠಾಣೆ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದಿದೆ.ಟಾರ್ಚರ್ ನೀಡಿ ಹಲ್ಲೆ ನಡೆಸಿದ ಯುವಕನ ವಿರುದ್ದ ಇನ್ಫೋಸಿಸ್ ಉದ್ಯೋಗಿ ಕಾನೂನು ಕ್ರಮ ಕೈಗೊಳ್ಳುವಂತೆ FIR ದಾಖಲಿಸಿದ್ದಾರೆ.

ಇನ್ಫೋಸಿಸ್ ನಲ್ಲಿ ಟೆಕ್ನಿಕಲ್ ಸಪೋರ್ಟ್ ಸ್ಪೆಷಲಿಸ್ಟ್ ಆಗಿ ಕೆಲಸ ಮಾಡುತ್ತಿರುವ ಇಂದು ಎಂಬುವರು ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಬೆಂಗಳೂರಿನ ಕೆಂಗೇರಿಯ ಸುಂಕಲ್ ಪಾಳ್ಯ ನಿವಾಸಿ ಮಧುನಂದನ್ ವಿರುದ್ದ ಪ್ರಕರಣ ದಾಖಲಾಗಿದೆ.

ಇಂದು ಹಾಗೂ ಮಧುನಂದನ್ ರವರ ಮದುವೆಗೆ ಜೂನ್ ತಿಂಗಳಿನಲ್ಲಿ ಮಾತುಕತೆ ಆಗಿತ್ತು.ನಂತರದ ದಿನಗಳಲ್ಲಿ ಇಂದು ವಿಚಾರದಲ್ಲಿ ಅನಗತ್ಯವಾಗಿ ಸಂಶಯಪಡುವುದು,ನೀನು ವರ್ಜಿನಾ..?,ಫೋನ್ ಮಾಡಿದ್ರೆ ಯಾಕೆ ರಿಸೀವ್ ಮಾಡಿಲ್ಲ,ಎಲ್ಲಿಗೆ ಹೋಗಿದ್ದೆ ಹೀಗೆ ಪ್ರಶ್ನೆಗಳನ್ನ ಹಾಕಿ ಮಧುನಂದನ್ ಅನುಮಾನ ವ್ಯಕ್ತಪಡಿಸುತ್ತಿದ್ದ.ಇದರಿಂದ ಮನನೊಂದ ಇಂದು ತನ್ನ ಮನೆಯವರೊಂದಿಗೆ ಚರ್ಚಿಸಿ ಮದುವೆ ರದ್ದು ಮಾಡಿಕೊಂಡರು.ಇದರಿಂದ ದ್ವೇಷ ಬೆಳೆಸಿಕೊಂಡ ಮಧುನಂದನ್ ತನ್ನ ಅಕ್ಕ ಸರಿತಾ,ಅಕ್ಕನ ಮಗ ಚಿರು,ಭಾವ ಯೋಗೇಶ್ ಜೊತೆ ಮನೆಗೆ ಪ್ರವೇಶಿಸಿ ಮದುವೆ ಆಗುವಂತೆ ಪೀಡಿಸಿದ್ದಾನೆ.ಇದನ್ನ ನಿರಾಕರಿಸಿದಾಗ ಇಂದು ಮೇಲೆ ಹಲ್ಲೆ ನಡೆಸಿದ್ದಾನೆ.ಅಡ್ಡ ಬಂದ ತಂಗಿ ಮೇಲೂ ಹಲ್ಲೆ ನಡೆಸಿ ರಂಪಾಟ ಮಾಡಿದ್ದಾನೆ.ನನ್ನನ್ನ ಮದುವೆ ಆಗದಿದ್ದರೆ ಯಾರು ಮದುವೆ ಆಗದಂತೆ ಮಾಡುವುದಾಗಿ ಹೆದರಿಸಿ ಕೊಲೆ ಬೆದರಿಕೆ ಹಾಕಿದ್ದಾನೆ.ಮಧುನಂದನ್ ರಿಂದ ಹಲ್ಲೆಗೊಳಗಾದ ಇಂದು ಹಾಗೂ ಮನೆಯವರು ಚಿಕಿತ್ಸೆ ಪಡೆದು ನಂತರ ಆತನ ವಿರುದ್ದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *