ಮದುವೆ ಆಗುವಂತೆ ಇನ್ಫೋಸಿಸ್ ಉದ್ಯೋಗಿಗೆ ಟಾರ್ಚರ್…ಮನೆಗೆ ನುಗ್ಗಿ ರಂಪಾಟ,ಕೊಲೆ ಬೆದರಿಕೆ…ಯುವಕನ ವಿರುದ್ದ FIR ದಾಖಲು

ಮದುವೆ ಆಗುವಂತೆ ಇನ್ಫೋಸಿಸ್ ಉದ್ಯೋಗಿಗೆ ಟಾರ್ಚರ್…ಮನೆಗೆ ನುಗ್ಗಿ ರಂಪಾಟ,ಕೊಲೆ ಬೆದರಿಕೆ…ಯುವಕನ ವಿರುದ್ದ FIR ದಾಖಲು

ಮೈಸೂರು,ಡಿ9,Tv10 ಕನ್ನಡ

ಮದುವೆ ಆಗುವಂತೆ ಒತ್ತಾಯಿಸಿದ ಯುವಕನೊಬ್ಬ ಇನ್ಫೋಸಿಸ್ ಉದ್ಯೋಗಿಯ ಮನೆಗೆ ನುಗ್ಗಿ ಹಲ್ಲೆ ನಡೆಸಿ ರಂಪಾಟ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆ ಮೈಸೂರಿನ ಮೇಟಗಳ್ಳಿ ಠಾಣೆ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದಿದೆ.ಟಾರ್ಚರ್ ನೀಡಿ ಹಲ್ಲೆ ನಡೆಸಿದ ಯುವಕನ ವಿರುದ್ದ ಇನ್ಫೋಸಿಸ್ ಉದ್ಯೋಗಿ ಕಾನೂನು ಕ್ರಮ ಕೈಗೊಳ್ಳುವಂತೆ FIR ದಾಖಲಿಸಿದ್ದಾರೆ.

ಇನ್ಫೋಸಿಸ್ ನಲ್ಲಿ ಟೆಕ್ನಿಕಲ್ ಸಪೋರ್ಟ್ ಸ್ಪೆಷಲಿಸ್ಟ್ ಆಗಿ ಕೆಲಸ ಮಾಡುತ್ತಿರುವ ಇಂದು ಎಂಬುವರು ಮೇಟಗಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಬೆಂಗಳೂರಿನ ಕೆಂಗೇರಿಯ ಸುಂಕಲ್ ಪಾಳ್ಯ ನಿವಾಸಿ ಮಧುನಂದನ್ ವಿರುದ್ದ ಪ್ರಕರಣ ದಾಖಲಾಗಿದೆ.

ಇಂದು ಹಾಗೂ ಮಧುನಂದನ್ ರವರ ಮದುವೆಗೆ ಜೂನ್ ತಿಂಗಳಿನಲ್ಲಿ ಮಾತುಕತೆ ಆಗಿತ್ತು.ನಂತರದ ದಿನಗಳಲ್ಲಿ ಇಂದು ವಿಚಾರದಲ್ಲಿ ಅನಗತ್ಯವಾಗಿ ಸಂಶಯಪಡುವುದು,ನೀನು ವರ್ಜಿನಾ..?,ಫೋನ್ ಮಾಡಿದ್ರೆ ಯಾಕೆ ರಿಸೀವ್ ಮಾಡಿಲ್ಲ,ಎಲ್ಲಿಗೆ ಹೋಗಿದ್ದೆ ಹೀಗೆ ಪ್ರಶ್ನೆಗಳನ್ನ ಹಾಕಿ ಮಧುನಂದನ್ ಅನುಮಾನ ವ್ಯಕ್ತಪಡಿಸುತ್ತಿದ್ದ.ಇದರಿಂದ ಮನನೊಂದ ಇಂದು ತನ್ನ ಮನೆಯವರೊಂದಿಗೆ ಚರ್ಚಿಸಿ ಮದುವೆ ರದ್ದು ಮಾಡಿಕೊಂಡರು.ಇದರಿಂದ ದ್ವೇಷ ಬೆಳೆಸಿಕೊಂಡ ಮಧುನಂದನ್ ತನ್ನ ಅಕ್ಕ ಸರಿತಾ,ಅಕ್ಕನ ಮಗ ಚಿರು,ಭಾವ ಯೋಗೇಶ್ ಜೊತೆ ಮನೆಗೆ ಪ್ರವೇಶಿಸಿ ಮದುವೆ ಆಗುವಂತೆ ಪೀಡಿಸಿದ್ದಾನೆ.ಇದನ್ನ ನಿರಾಕರಿಸಿದಾಗ ಇಂದು ಮೇಲೆ ಹಲ್ಲೆ ನಡೆಸಿದ್ದಾನೆ.ಅಡ್ಡ ಬಂದ ತಂಗಿ ಮೇಲೂ ಹಲ್ಲೆ ನಡೆಸಿ ರಂಪಾಟ ಮಾಡಿದ್ದಾನೆ.ನನ್ನನ್ನ ಮದುವೆ ಆಗದಿದ್ದರೆ ಯಾರು ಮದುವೆ ಆಗದಂತೆ ಮಾಡುವುದಾಗಿ ಹೆದರಿಸಿ ಕೊಲೆ ಬೆದರಿಕೆ ಹಾಕಿದ್ದಾನೆ.ಮಧುನಂದನ್ ರಿಂದ ಹಲ್ಲೆಗೊಳಗಾದ ಇಂದು ಹಾಗೂ ಮನೆಯವರು ಚಿಕಿತ್ಸೆ ಪಡೆದು ನಂತರ ಆತನ ವಿರುದ್ದ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *