ಮಹಿಳೆಯರ ಬಗ್ಗೆ ಅಸಭ್ಯ ಚಿತ್ರಗಳನ್ನ ಬಿಡಿಸಿ ಮನೆ ಮುಂದೆ ಇಡುತ್ತಿದ್ದ ಸೈಕೋ…ನ್ಯಾಯ ನೀಡುವ ಗ್ರಾಮದ ಮುಖಂಡನಿಂದಲೇ ಕೃತ್ಯ…ರೆಡ್ ಹ್ಯಾಂಡಾಗಿ ಹಿಡಿದ ಗ್ರಾಮಸ್ಥರು…

ಮಹಿಳೆಯರ ಬಗ್ಗೆ ಅಸಭ್ಯ ಚಿತ್ರಗಳನ್ನ ಬಿಡಿಸಿ ಮನೆ ಮುಂದೆ ಇಡುತ್ತಿದ್ದ ಸೈಕೋ…ನ್ಯಾಯ ನೀಡುವ ಗ್ರಾಮದ ಮುಖಂಡನಿಂದಲೇ ಕೃತ್ಯ…ರೆಡ್ ಹ್ಯಾಂಡಾಗಿ ಹಿಡಿದ ಗ್ರಾಮಸ್ಥರು…

ನಂಜನಗೂಡು,ಡಿ10,Tv10 ಕನ್ನಡ

ಮಹಿಳೆಯರು,ಯುವತಿಯರ ಬಗ್ಗೆ ಅಸಭ್ಯವಾಗಿ ಲೈಂಗಿಕ ಚಿತ್ರಗಳನ್ನ ಬಿಡಿಸಿ ಹೆಸರುಗಳನ್ನ ನಮೂದಿಸಿ ಮನೆಗಳ ಮುಂದೆ ಇಟ್ಟು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಸೈಕೋಪಾತ್ ನ ಗ್ರಾಮಸ್ಥರು ಹೊಂಚು ಹಾಕಿ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ವಿಲಕ್ಷಣ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮದ ವರದರಾಜಸ್ವಾಮಿ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.ಗ್ರಾಮದಲ್ಲಿ ಸಮಸ್ಯೆಗಳು ಶುರುವಾದಾಗ ನ್ಯಾಯಕ್ಕಾಗಿ ನಿಲ್ಲುತ್ತಿದ್ದ ಮುಖಂಡನಿಂದಲೇ ಕೃತ್ಯ ನಡೆದಿದೆ.ಹಲವಾರು ದಿನಗಳಿಂದ ಸೈಕೋಪಾತ್ ನ ಹಿಡಿಯಲು ಗ್ರಾಮಸ್ಥರು ಹೊಂಚು ಹಾಕಿದ್ದು ನಿನ್ನೆ ರಾತ್ರಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.ಸಾಕ್ಷಿ ಸಮೇತ ಈತನನ್ನ ಹಿಡಿದ ಗ್ರಾಮಸ್ಥರು ಹುಲ್ಲಹಳ್ಳಿ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ವರದರಾಜಸ್ವಾಮಿ ಬಡಾವಣೆ ನಿವಾಸಿ ಹಾಗೂ ಗ್ರಾಮದ ಮುಖಂಡ ಶಿವಣ್ಣ(54) ಸಿಕ್ಕಿ ಬಿದ್ದ ಸೈಕೋಪಾತ್.ಸುಮಾರು ಮೂರ್ನಾಲ್ಕು ವರ್ಷಗಳಿಂದ ವರದರಾಜಸ್ವಾಮಿ ಬಡಾವಣೆ ಮಹಿಳೆಯರ ಬಗ್ಗೆ ಅಸಭ್ಯವಾಗಿ ಚಿತ್ರಗಳನ್ನ ಬಿಳಿ ಹಾಳೆಯಲ್ಲಿ ಬರೆದು ಹೆಸರುಗಳನ್ನ ಜೊತೆ ಉಲ್ಲೇಖಿಸಿ ಅವರ ಮನೆಗಳ ಮುಂದೆ ಇಡುತ್ತಿದ್ದ.ಇದರಿಂದಾಗಿ ಗ್ರಾಮದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸಿದ್ದವು.ಕೆಲವು ಮದುವೆ ಸಂಭಂಧಗಳೂ ಮುರಿದು ಬಿದ್ದಿದ್ದವು.ಮನೆಗಳ ಮುಂದೆ ಕಾಣಿಸಿಕೊಳ್ಳುತ್ತಿದ್ದ ಅಸಭ್ಯ ಚಿತ್ರಗಳುಳ್ಳ ಚೀಟಿಗಳು ಗ್ರಾಮವನ್ನೇ ಚಿಂತೆಗೆ ಈಡು ಮಾಡಿತ್ತು.ಸೈಕೋಪಾತ್ ನನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಗ್ರಾಮಸ್ಥರು ಹಲವಾರು ದಿನಗಳಿಂದ ಹೊಂಚು ಹಾಕುತ್ತಿದ್ದರು.ನಿನ್ನೆ ತಡರಾತ್ರಿ ಸೈಕಲ್ ನಲ್ಲಿ ಬಂದ ಶಿವಣ್ಣ ಮನೆ ಮುಂದೆ ಚೀಟಿಯನ್ನ ಇಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬಿಸಿ ಬಿಸಿ ಕಜ್ಜಾಯಗಳನ್ನ ಕೊಟ್ಟ ಗ್ರಾಮಸ್ಥರು ಹುಲ್ಲಹಳ್ಳಿ ಪೊಲೀಸರ ವಶಕ್ಕೆ ನೀಡಿದ್ದಾರೆ.ಶಿವಣ್ಣನ ವಿರುದ್ದ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಿಸಿರುವ ಹುಲ್ಲಹಳ್ಳಿ ಠಾಣೆ ಪೊಲೀಸರು ಕಂಬಿ ಎಣಿಸಲು ಕಳಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *