ಮಹಿಳೆಯರ ಬಗ್ಗೆ ಅಸಭ್ಯ ಚಿತ್ರಗಳನ್ನ ಬಿಡಿಸಿ ಮನೆ ಮುಂದೆ ಇಡುತ್ತಿದ್ದ ಸೈಕೋ…ನ್ಯಾಯ ನೀಡುವ ಗ್ರಾಮದ ಮುಖಂಡನಿಂದಲೇ ಕೃತ್ಯ…ರೆಡ್ ಹ್ಯಾಂಡಾಗಿ ಹಿಡಿದ ಗ್ರಾಮಸ್ಥರು…

ಮಹಿಳೆಯರ ಬಗ್ಗೆ ಅಸಭ್ಯ ಚಿತ್ರಗಳನ್ನ ಬಿಡಿಸಿ ಮನೆ ಮುಂದೆ ಇಡುತ್ತಿದ್ದ ಸೈಕೋ…ನ್ಯಾಯ ನೀಡುವ ಗ್ರಾಮದ ಮುಖಂಡನಿಂದಲೇ ಕೃತ್ಯ…ರೆಡ್ ಹ್ಯಾಂಡಾಗಿ ಹಿಡಿದ ಗ್ರಾಮಸ್ಥರು…

ನಂಜನಗೂಡು,ಡಿ10,Tv10 ಕನ್ನಡ

ಮಹಿಳೆಯರು,ಯುವತಿಯರ ಬಗ್ಗೆ ಅಸಭ್ಯವಾಗಿ ಲೈಂಗಿಕ ಚಿತ್ರಗಳನ್ನ ಬಿಡಿಸಿ ಹೆಸರುಗಳನ್ನ ನಮೂದಿಸಿ ಮನೆಗಳ ಮುಂದೆ ಇಟ್ಟು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಸೈಕೋಪಾತ್ ನ ಗ್ರಾಮಸ್ಥರು ಹೊಂಚು ಹಾಕಿ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ವಿಲಕ್ಷಣ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮದ ವರದರಾಜಸ್ವಾಮಿ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.ಗ್ರಾಮದಲ್ಲಿ ಸಮಸ್ಯೆಗಳು ಶುರುವಾದಾಗ ನ್ಯಾಯಕ್ಕಾಗಿ ನಿಲ್ಲುತ್ತಿದ್ದ ಮುಖಂಡನಿಂದಲೇ ಕೃತ್ಯ ನಡೆದಿದೆ.ಹಲವಾರು ದಿನಗಳಿಂದ ಸೈಕೋಪಾತ್ ನ ಹಿಡಿಯಲು ಗ್ರಾಮಸ್ಥರು ಹೊಂಚು ಹಾಕಿದ್ದು ನಿನ್ನೆ ರಾತ್ರಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.ಸಾಕ್ಷಿ ಸಮೇತ ಈತನನ್ನ ಹಿಡಿದ ಗ್ರಾಮಸ್ಥರು ಹುಲ್ಲಹಳ್ಳಿ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ವರದರಾಜಸ್ವಾಮಿ ಬಡಾವಣೆ ನಿವಾಸಿ ಹಾಗೂ ಗ್ರಾಮದ ಮುಖಂಡ ಶಿವಣ್ಣ(54) ಸಿಕ್ಕಿ ಬಿದ್ದ ಸೈಕೋಪಾತ್.ಸುಮಾರು ಮೂರ್ನಾಲ್ಕು ವರ್ಷಗಳಿಂದ ವರದರಾಜಸ್ವಾಮಿ ಬಡಾವಣೆ ಮಹಿಳೆಯರ ಬಗ್ಗೆ ಅಸಭ್ಯವಾಗಿ ಚಿತ್ರಗಳನ್ನ ಬಿಳಿ ಹಾಳೆಯಲ್ಲಿ ಬರೆದು ಹೆಸರುಗಳನ್ನ ಜೊತೆ ಉಲ್ಲೇಖಿಸಿ ಅವರ ಮನೆಗಳ ಮುಂದೆ ಇಡುತ್ತಿದ್ದ.ಇದರಿಂದಾಗಿ ಗ್ರಾಮದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸಿದ್ದವು.ಕೆಲವು ಮದುವೆ ಸಂಭಂಧಗಳೂ ಮುರಿದು ಬಿದ್ದಿದ್ದವು.ಮನೆಗಳ ಮುಂದೆ ಕಾಣಿಸಿಕೊಳ್ಳುತ್ತಿದ್ದ ಅಸಭ್ಯ ಚಿತ್ರಗಳುಳ್ಳ ಚೀಟಿಗಳು ಗ್ರಾಮವನ್ನೇ ಚಿಂತೆಗೆ ಈಡು ಮಾಡಿತ್ತು.ಸೈಕೋಪಾತ್ ನನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಗ್ರಾಮಸ್ಥರು ಹಲವಾರು ದಿನಗಳಿಂದ ಹೊಂಚು ಹಾಕುತ್ತಿದ್ದರು.ನಿನ್ನೆ ತಡರಾತ್ರಿ ಸೈಕಲ್ ನಲ್ಲಿ ಬಂದ ಶಿವಣ್ಣ ಮನೆ ಮುಂದೆ ಚೀಟಿಯನ್ನ ಇಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬಿಸಿ ಬಿಸಿ ಕಜ್ಜಾಯಗಳನ್ನ ಕೊಟ್ಟ ಗ್ರಾಮಸ್ಥರು ಹುಲ್ಲಹಳ್ಳಿ ಪೊಲೀಸರ ವಶಕ್ಕೆ ನೀಡಿದ್ದಾರೆ.ಶಿವಣ್ಣನ ವಿರುದ್ದ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಿಸಿರುವ ಹುಲ್ಲಹಳ್ಳಿ ಠಾಣೆ ಪೊಲೀಸರು ಕಂಬಿ ಎಣಿಸಲು ಕಳಿಸಿದ್ದಾರೆ…

Spread the love

Related post

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ…

ಜಮೀನಿಗೆ ತೆರಳಿದ್ದ ಮಹಿಳೆ ನಿಗೂಢ ನಾಪತ್ತೆ…ಸ್ಥಳದಲ್ಲಿ ಮನುಷ್ಯನ ಬೆರಳಿನಿಂದ ಸೃಷ್ಟಿಸಿರುವ ಚಿರತೆ ಹೆಜ್ಜೆಯಂತ ಗರುತು ಪತ್ತೆ…ಕುಟುಂಬಸ್ಥರಲ್ಲಿ ಆತಂಕ… ನಂಜನಗೂಡು,ಮೇ26,Tv10 ಕನ್ನಡ ಜಮೀನಿಗೆ ತೆರಳಿದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ…
ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ…

ಗೋವುಗಳಿಗೆ ಪೂಜೆ ಸಲ್ಲಿಸು ಮೇವು ವಿತರಿಸಿ ಗಣಪತಿ ಸಚ್ಚಿದಾನಂದಸ್ವಾಮಿಗಳ ಹುಟ್ಟು ಹಬ್ಬ ಆಚರಣೆ… ಮೈಸೂರು,ಮೇ26,Tv10 ಕನ್ನಡ ಶ್ರೀಗಣಪತಿ ಸಚ್ಚಿದಾನಂದ ಶ್ರೀಗಳ 84 ನೇ ಹುಟ್ಟುಹಬ್ಬ ಆಶ್ರಮದಲ್ಲಿ ಸಂಭ್ರಮದಿಂದ ನೆರವೇರುತ್ತಿದೆ.ವಿವಿಧ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ ಪೊನ್ನಣ್ಣ ಸೇರಿ ಹಲವು ಪ್ರಮುಖರ ಜೊತೆಗೆ ದೆಹಲಿಯ ಕನ್ನಡ ಭವನದಲ್ಲಿ ಬೆಳಗಿನ ಉಪಹಾರ ಸವಿದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ…

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಚಿವರಾದ ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ, ಬೈರತಿ ಸುರೇಶ್, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹಿರಿಯ ಕಾಂಗ್ರೆಸ್ ಮುಖಂಡರೂ ಹರಿಯಾಣ ಉಸ್ತುವಾರಿ ಬಿ.ಕೆ.ಹರಿಪ್ರಸಾದ್ ಮತ್ತು ಕಾನೂನು ಸಲಹೆಗಾರರಾದ…

Leave a Reply

Your email address will not be published. Required fields are marked *