ಮಹಿಳೆಯರ ಬಗ್ಗೆ ಅಸಭ್ಯ ಚಿತ್ರಗಳನ್ನ ಬಿಡಿಸಿ ಮನೆ ಮುಂದೆ ಇಡುತ್ತಿದ್ದ ಸೈಕೋ…ನ್ಯಾಯ ನೀಡುವ ಗ್ರಾಮದ ಮುಖಂಡನಿಂದಲೇ ಕೃತ್ಯ…ರೆಡ್ ಹ್ಯಾಂಡಾಗಿ ಹಿಡಿದ ಗ್ರಾಮಸ್ಥರು…

ಮಹಿಳೆಯರ ಬಗ್ಗೆ ಅಸಭ್ಯ ಚಿತ್ರಗಳನ್ನ ಬಿಡಿಸಿ ಮನೆ ಮುಂದೆ ಇಡುತ್ತಿದ್ದ ಸೈಕೋ…ನ್ಯಾಯ ನೀಡುವ ಗ್ರಾಮದ ಮುಖಂಡನಿಂದಲೇ ಕೃತ್ಯ…ರೆಡ್ ಹ್ಯಾಂಡಾಗಿ ಹಿಡಿದ ಗ್ರಾಮಸ್ಥರು…

ನಂಜನಗೂಡು,ಡಿ10,Tv10 ಕನ್ನಡ

ಮಹಿಳೆಯರು,ಯುವತಿಯರ ಬಗ್ಗೆ ಅಸಭ್ಯವಾಗಿ ಲೈಂಗಿಕ ಚಿತ್ರಗಳನ್ನ ಬಿಡಿಸಿ ಹೆಸರುಗಳನ್ನ ನಮೂದಿಸಿ ಮನೆಗಳ ಮುಂದೆ ಇಟ್ಟು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಸೈಕೋಪಾತ್ ನ ಗ್ರಾಮಸ್ಥರು ಹೊಂಚು ಹಾಕಿ ರೆಡ್ ಹ್ಯಾಂಡಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ವಿಲಕ್ಷಣ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮದ ವರದರಾಜಸ್ವಾಮಿ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.ಗ್ರಾಮದಲ್ಲಿ ಸಮಸ್ಯೆಗಳು ಶುರುವಾದಾಗ ನ್ಯಾಯಕ್ಕಾಗಿ ನಿಲ್ಲುತ್ತಿದ್ದ ಮುಖಂಡನಿಂದಲೇ ಕೃತ್ಯ ನಡೆದಿದೆ.ಹಲವಾರು ದಿನಗಳಿಂದ ಸೈಕೋಪಾತ್ ನ ಹಿಡಿಯಲು ಗ್ರಾಮಸ್ಥರು ಹೊಂಚು ಹಾಕಿದ್ದು ನಿನ್ನೆ ರಾತ್ರಿ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ.ಸಾಕ್ಷಿ ಸಮೇತ ಈತನನ್ನ ಹಿಡಿದ ಗ್ರಾಮಸ್ಥರು ಹುಲ್ಲಹಳ್ಳಿ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ.

ವರದರಾಜಸ್ವಾಮಿ ಬಡಾವಣೆ ನಿವಾಸಿ ಹಾಗೂ ಗ್ರಾಮದ ಮುಖಂಡ ಶಿವಣ್ಣ(54) ಸಿಕ್ಕಿ ಬಿದ್ದ ಸೈಕೋಪಾತ್.ಸುಮಾರು ಮೂರ್ನಾಲ್ಕು ವರ್ಷಗಳಿಂದ ವರದರಾಜಸ್ವಾಮಿ ಬಡಾವಣೆ ಮಹಿಳೆಯರ ಬಗ್ಗೆ ಅಸಭ್ಯವಾಗಿ ಚಿತ್ರಗಳನ್ನ ಬಿಳಿ ಹಾಳೆಯಲ್ಲಿ ಬರೆದು ಹೆಸರುಗಳನ್ನ ಜೊತೆ ಉಲ್ಲೇಖಿಸಿ ಅವರ ಮನೆಗಳ ಮುಂದೆ ಇಡುತ್ತಿದ್ದ.ಇದರಿಂದಾಗಿ ಗ್ರಾಮದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸಿದ್ದವು.ಕೆಲವು ಮದುವೆ ಸಂಭಂಧಗಳೂ ಮುರಿದು ಬಿದ್ದಿದ್ದವು.ಮನೆಗಳ ಮುಂದೆ ಕಾಣಿಸಿಕೊಳ್ಳುತ್ತಿದ್ದ ಅಸಭ್ಯ ಚಿತ್ರಗಳುಳ್ಳ ಚೀಟಿಗಳು ಗ್ರಾಮವನ್ನೇ ಚಿಂತೆಗೆ ಈಡು ಮಾಡಿತ್ತು.ಸೈಕೋಪಾತ್ ನನ್ನು ರೆಡ್ ಹ್ಯಾಂಡಾಗಿ ಹಿಡಿಯಲು ಗ್ರಾಮಸ್ಥರು ಹಲವಾರು ದಿನಗಳಿಂದ ಹೊಂಚು ಹಾಕುತ್ತಿದ್ದರು.ನಿನ್ನೆ ತಡರಾತ್ರಿ ಸೈಕಲ್ ನಲ್ಲಿ ಬಂದ ಶಿವಣ್ಣ ಮನೆ ಮುಂದೆ ಚೀಟಿಯನ್ನ ಇಡುವಾಗ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದಾನೆ.ಬಿಸಿ ಬಿಸಿ ಕಜ್ಜಾಯಗಳನ್ನ ಕೊಟ್ಟ ಗ್ರಾಮಸ್ಥರು ಹುಲ್ಲಹಳ್ಳಿ ಪೊಲೀಸರ ವಶಕ್ಕೆ ನೀಡಿದ್ದಾರೆ.ಶಿವಣ್ಣನ ವಿರುದ್ದ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಿಸಿರುವ ಹುಲ್ಲಹಳ್ಳಿ ಠಾಣೆ ಪೊಲೀಸರು ಕಂಬಿ ಎಣಿಸಲು ಕಳಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *