ಅಕ್ರಮ ಸಂಭಂಧ ವಿರೋಧಿಸಿದ್ದೇ ತಪ್ಪಾಯ್ತು…ಪತ್ನಿ ಹಾಗೂ ಮಗಳ ಮೇಲೆ ಹಲ್ಲೆ…ಪತಿ ಹಾಗೂ ಪ್ರಿಯತಮೆ ವಿರುದ್ದ ಪ್ರಕರಣ ದಾಖಲು…

ಅಕ್ರಮ ಸಂಭಂಧ ವಿರೋಧಿಸಿದ್ದೇ ತಪ್ಪಾಯ್ತು…ಪತ್ನಿ ಹಾಗೂ ಮಗಳ ಮೇಲೆ ಹಲ್ಲೆ…ಪತಿ ಹಾಗೂ ಪ್ರಿಯತಮೆ ವಿರುದ್ದ ಪ್ರಕರಣ ದಾಖಲು…

ಮೈಸೂರು,ಡಿ12,Tv10 ಕನ್ನಡ

ಅಕ್ರಮ ಸಂಭಂಧವನ್ನ ವಿರೋಧಿಸಿ ಪ್ರಶ್ನಿಸಿದ ಪತ್ನಿ ಹಾಗೂ ಮಗಳ ಮೇಲೆ ಪ್ರಿಯತಮೆ ಜೊತೆ ಸೇರಿ ಪತಿರಾಯ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಬೆಂಗಳೂರಿನ ಶ್ವೇತಾ ಎಂಬುವರು ತಮ್ಮ ಪತಿ ಸಂತೋಷ್ ಕುಮಾರ್ ಹಾಗೂ ಆತನ ಪ್ರಿಯತಮೆ ಶ್ವೇತಾ ವಿರುದ್ದ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ವೇತಾ ಹಾಗೂ ಸಂತೋಷ್ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.ಬೆಂಗಳೂರಿನ ಕೆಂಗೇರಿಯ ಲಿಂಗಧೀರನಹಳ್ಳಿ ಬಡಾವಣೆ ನಿವಾಸಿಗಳು.ಇಬ್ಬರ ಅನ್ಯೋನ್ಯ ದಾಂಪತ್ಯ ಜೀವನಕ್ಕೆ ಬಿರುಗಾಳಿಯಂತೆ ಎಂಟ್ರಿ ಕೊಟ್ಟವಳು ಶಿಲ್ಪಾ.ಸುಮಾರು 6 ತಿಂಗಳ ಹಿಂದೆ ಸಂತೋಷ್ ಕುಮಾರ್ ಜೀವನಕ್ಕೆ ಶಿಲ್ಪಾ ಎಂಟ್ರಿಕೊಟ್ಟ ಪರಿಣಾಮ ಶ್ವೇತಾ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿತು.ಆಗಾಗ ಮೊಬೈಲ್ ನಲ್ಲಿ ಸಂತೋಷ್ ಕುಮಾರ್ ಜೊತೆ ಮಾತನಾಡಿ ಅಶ್ಲೀಲ ಮೆಸೇಜ್ ಗಳನ್ನ ಹಾಕುತ್ತಾ ಹತ್ತಿರವಾದ ಶಿಲ್ಪಾ ಕ್ರಮೇಣ ದಂಪತಿಯ ದಾಂಪತ್ಯ ಜೀವನಕ್ಕೆ ಮುಳ್ಳಾದರು.ಶಿಲ್ಪಾ ಪ್ರೇರೇಪಣೆಯಿಂದ ಸಂತೋಷ್ ಕುಮಾರ್ ಆಗಾಗ ಪತ್ನಿ ಹಾಗೂ ಮಕ್ಕಳ ಮೇಲೆ ಹಲ್ಲೆ ನಡೆಸಿ ರಂಪಾಟ ಮಾಡುತ್ತಿದ್ದ.ಈ ಬಗ್ಗೆ ಈ ಹಿಂದೆ ಶ್ವೇತಾ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ದ ದೂರು ದಾಖಲಿಸಿದ್ದರು.ಈ ಬೆಳವಣಿಗೆಯಿಂದ ಇಬ್ಬರು ಮಕ್ಕಳ ಮೇಲೆ ಪರಿಣಾಮ ಬೀರಿತು.ಕಿರಿ ಮಗಳು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಮೈಸೂರಿನ ತಾಯಿ ಮನೆಯಲ್ಲಿ ಉಳಿದುಕೊಂಡಿದ್ದಳು.ಮಗಳನ್ನ ನೋಡಲು ಶ್ವೇತಾ ತನ್ನ ಹಿರಿ ಮಗಳ ಜೊತೆ ಮೈಸೂರಿಗೆ ಬಂದಾಗ ಬನ್ನಿಮಂಟಪದ ಎಲ್.ಐ.ಸಿ.ಸರ್ಕಲ್ ಬಳಿ ಸಂತೋಷ್ ಕುಮಾರ್ ಹಾಗೂ ಪ್ರಿಯತಮೆ ಶಿಲ್ಪಾ ಎದುರಾಗಿ ಶ್ವೇತಾ ಹಾಗೂ ಮಗಳ ಮೇಲೆ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ.ಹಲ್ಲೆಗೊಳಗಾದ ಶ್ವೇತಾ ಘಟನೆಯಿಂದ ಚೇತರಿಕೆಯಾದ ನಂತರ ಎನ್.ಆರ್.ಠಾಣೆಯಲ್ಲಿ ಪತಿ ಹಾಗೂ ಆತನ ಪ್ರಿಯತಮೆ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *