ವರ್ಕ್ ಫ್ರಂ ಹೋಮ್ ನಲ್ಲಿ ಹೆಚ್ಚಿನ ಆದಾಯ ಆಮಿಷ…19.89 ಲಕ್ಷ ಕಳೆದುಕೊಂಡ ಮಹಿಳೆ

ವರ್ಕ್ ಫ್ರಂ ಹೋಮ್ ನಲ್ಲಿ ಹೆಚ್ಚಿನ ಆದಾಯ ಆಮಿಷ…19.89 ಲಕ್ಷ ಕಳೆದುಕೊಂಡ ಮಹಿಳೆ

ಮೈಸೂರು,ಡಿ12,Tv10 ಕನ್ನಡ

ವರ್ಕ್ ಫ್ರಂ ಹೋಮ್ ನಿಂದ ಹೆಚ್ಚಿನ ಆದಾಯ ಗಳಿಸಬಹುದೆಂಬ ಆಮಿಷವೊಡ್ಡಿದ ನಯವಂಚಕರು ಮೈಸೂರಿನ ಮಹಿಳೆಯೊಬ್ಬರಿಗೆ 19.89 ಲಕ್ಷಕ್ಕೆ ಪಂಗನಾಮ ಹಾಕಿದ್ದಾರೆ.ರಾಜೀವ್ ನಗರದ ನಿವಾಸಿ ತಹಸೀನಾ ರಾವ್ ತರ್ ಹಣ ಕಳೆದುಕೊಂಡ ಮಹಿಳೆ.ಟೆಲಿಗ್ರಾಂ‌ ಆಪ್ ಮೂಲಕ ವಂಚಕರು ತಹಸೀನಾ ರಾವ್ ತರ್ ಗೆ ವರ್ಕ್ ಫ್ರಂ ಹೋಮ್ ಮೂಲಕ ಹೆಚ್ಚಿನ ಆದಾಯ ಗಳಿಸಬಹುದೆಂಬ ಸಂದೇಶ ಕಳಿಸಿದ್ದಾರೆ.ಇದನ್ನ ನಂಬಿದ ತಹಸೀನಾ ರಾವ್ ತರ್ ಟೆಲಿಗ್ರಾಂ ಗ್ರೂಪ್ ಗೆ ಸೇರಿಕೊಂಡಿದ್ದಾರೆ.ಪ್ರತಿದಿನ 2 ರಿಂದ 4 ಸಾವಿರ ಗಳಿಸಬಹುದೆಂದು ನಂಬಿಸಿ ಹಣ ಹೂಡುವಂತೆ ಯಾಮಾರಿಸಿದ್ದಾರೆ.ವಂಚಕರ ಮಾತನ್ನ ನಂಬಿದ ತಹಸೀನಾ ರಾವ್ ತರ್ ಹಂತ ಹಂತವಾಗಿ ಒಟ್ಟು 19,89,723/ರೂ ಗಳನ್ನ ಪಾವತಿಸಿದ್ದಾರೆ.ಕೊನೆಗೆ ಹಣವೂ ಇಲ್ಲ ಲಾಭವೂ ಇಲ್ಲದಂತಾಗಿ ವಂಚನೆಗೆ ಒಳಗಾಗಿದ್ದಾರೆ.ಈ ಕುರಿತಂತೆ ತಹಸೀನಾ ರಾವ್ ತರ್ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *