ಕಾಲೇಜು ವಿಧ್ಯಾರ್ಥಿಗಳಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ…

ಕಾಲೇಜು ವಿಧ್ಯಾರ್ಥಿಗಳಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ…

ಮೈಸೂರು,ಡಿ12,Tv10 ಕನ್ನಡ

ಅಪರಾಧ ತಡೆ ಮಾಸಾಚರಣೆ ಪ್ರಯುಕ್ತ ಇಂದು ಮೈಸೂರಿನ ದೇವರಾಜ ಪೊಲೀಸ್ ಠಾಣೆ ವ್ಯಾಪ್ತಿಯ ದೇವರಾಜ ಪದವಿ ಪೂರ್ವ ಕಾಲೇಜು ವಿಧ್ಯಾರ್ಥಿಗಳಿಗೆ ಇಂದು Prevention of Crime & Cyber Safe Girl ಎಂಬ ವಿಷಯದ ಬಗ್ಗೆ ಜಾಗೃತಿ ಮೂಡಿಸಲಾಯಿತು. ದೇವರಾಜ ಪೊಲೀಸ್ ಠಾಣೆಯ ಪಿಎಸ್ಐ ಜೈಕೀರ್ತಿ ರವರು ಉಪನ್ಯಾಸ ನೀಡಿದರು.ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಗಳು ಹೆಚ್ಚುತ್ತಿವೆ.ಯುವ ಜನಾಂಗ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಮುಳುಗಿದ್ದಾರೆ.ನಯವಂಚಕರು ಅಮಾಯಕರನ್ನ ನಾನಾ ವಿಧಾನದ ಆಮಿಷಗಳನ್ನ ತೋರಿಸಿ ಆಕರ್ಷಿಸುತ್ತಾರೆ.ನಂತರ ಮಾಹಿತಿಗಳನ್ನ ಪಡೆದು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಹಿನ್ನೆಲೆಯಲ್ಲಿ ಮಕ್ಕಳು ಸೋಷಿಯಲ್ ಮೀಡಿಯಾ ದಲ್ಲಿ ಅಪರಿಚಿತ ವ್ಯಕ್ತಿಗಳ ಫ್ರೆಂಡ್ ರಿಕ್ವೆಸ್ಟ್ ಗಳನ್ನು ಅಕ್ಸೆಪ್ಟ್ ಮಾಡದೇ ಎಚ್ಚರ ವಹಿಸಬೇಕು, ತಮ್ಮ ಖಾಸಗಿ ಫೋಟೋ ಗಳನ್ನು ಯಾರಿಗೂ ಸಹ ಶೇರ್ ಮಾಡಬಾರದು,ತುರ್ತು ಸಂದರ್ಭದಲ್ಲಿ ಪ್ಯಾನಿಕ್ ಬಟನ್ ಉಪಯೋಗ ಮಾಡುವಂತೆ ಸಲಹೆ ನೀಡಿದರು. 112, 1098 ಸಹಾಯವಾಣಿ ಗಳ ಉಪಯುಕ್ತತೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುವ ಮೂಲಕ ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದರು.ಈ ಸಂದರ್ಭದಲ್ಲಿ ಕಾಲೇಜು ಪ್ರಾಂಶುಪಾಲ ಎಂ. ಜಿ. ರಮಾನಂದ್, ದೇವರಾಜ ಪೊಲೀಸ್ ಠಾಣೆ ನೀರಿಕ್ಷಕ ಟಿ ಬಿ ಶಿವಕುಮಾರ್, ಪಿ ಎಸ್ ಐ ಪ್ರಭು ಹಾಗೂ ಸಿಬ್ಬಂದಿ ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *