ಎಸ್ ಎಂ ಕೃಷ್ಣ ಅವರ ಅಂತಿಮ ಕ್ರಿಯೆ ಅತ್ಯಂತ ಗೌರವಯುತವಾಗಿ ನಡೆದಿದೆ…ಸರ್ಕಾರದ ನಡುವಳಿಕೆ ಮೆಚ್ಚುವಂತದ್ದು…ಎಂಎಲ್ಸಿ ಹೆಚ್.ವಿಶ್ವನಾಥ್…

ಎಸ್ ಎಂ ಕೃಷ್ಣ ಅವರ ಅಂತಿಮ ಕ್ರಿಯೆ ಅತ್ಯಂತ ಗೌರವಯುತವಾಗಿ ನಡೆದಿದೆ…ಸರ್ಕಾರದ ನಡುವಳಿಕೆ ಮೆಚ್ಚುವಂತದ್ದು…ಎಂಎಲ್ಸಿ ಹೆಚ್.ವಿಶ್ವನಾಥ್…

ಮೈಸೂರು,ಡಿ12,Tv10 ಕನ್ನಡ

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರ ಅಂತ್ಯಕ್ರಿಯೆ ಗೌರವಯುತವಾಗಿ ನಡೆದಿದೆ.ಈ ವಿಚಾರದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಮೆಚ್ಚುಗೆ ವ್ಯಕ್ತಪಡಿಸುವಂತಹದ್ದು.
ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.ಇದೇ ವೇಳೆ ಮಾತನಾಡಿ
ಪ್ರಧಾನಿ ನರೇಂದ್ರ ಮೋದಿ ಕೂಡ ಸಂತಾಪ ಸೂಚಿಸಿದರು.ಆದರೆ ಸೋನಿಯಾಗಾಂಧಿ ತುಟಿ ಬಿಚ್ಚಲಿಲ್ಲ.ಒಬ್ಬ ವ್ಯಕ್ತಿ ಕಾಲವಾದಾಗ ಮನುಷ್ಯತ್ವ ಇರಬೇಕು, ದ್ವೇಷ ಇರಬಾರದು.
ಸತ್ತಾಗಲೂ ದ್ವೇಷ ಮಾಡುವುದು ಸರಿಯಲ್ಲ.
ಸಾರ್ವಜನಿಕ ಜೀವನದಲ್ಲಿರುವವರು ಪಕ್ಷಾತೀತವಾಗಿ ನಡೆದುಕೊಳ್ಳಬೇಕು.
ಕಾಂಗ್ರೆಸ್ ನ ಹಿರಿಯ ನಾಯಕರು ದೇವರಾಜ ಅರಸ್ ಸತ್ತಾಗಲೂ ಸಹ ಸಂತಾಪ ಸೂಚಿಸಲಿಲ್ಲ.
ಪಿ ವಿ ನರಸಿಂಹರಾವ್ ಸಾವನ್ನಪಿದಾಗಲೂ ಸಂತಾಪ ಸೂಚಿಸಲಿಲ್ಲ.
ವಿ ಪಿ ಸಿಂಗ್ ಹಾಗೂ ಚಂದ್ರಶೇಖರ್ ಸತ್ತಾಗಲೂ ಸಂತಾಪ ಸೂಚಿಸಲಿಲ್ಲ.ಹಲವು ಕಾರ್ಯಕ್ರಮಗಳ ಮೂಲಕ ಕಾಂಗ್ರೆಸ್ ಗೆ ಹೆಸರು ತಂದುಕೊಟ್ಟಿದ್ದು ಎಸ್ ಎಂ ಕೃಷ್ಣ ಅವರು.
ಸಾವಿನಲ್ಲೂ ರಾಜಕಾರಣ, ಪಕ್ಷ ದ್ವೇಷ ಮುಖ್ಯವಾಗಬಾರದು.
ಮೈಸೂರಿನಲ್ಲಿ ಇನ್ಫೋಸಿಸ್ ಸಂಸ್ಥೆಯಿಂದಲೂ ಒಂದು ಸಂತಾಪ ಸೂಚಿಸಲಿಲ್ಲ.
ಸಾವಿರಾರು ಕೋಟಿ ರೂಪಾಯಿ ವ್ಯವಹಾರ ನಡೆಯುತ್ತಿದೆ.ಇದಕ್ಕೆಲ್ಲ ಎಸ್ ಎಂ ಕೃಷ್ಣ ಕಾರಣರು.ಬ್ಯುಸಿನೆಸ್, ಇಂಡಸ್ಟ್ರಿ ಮನುಷ್ಯತ್ವ ಕಳೆದುಕೊಂಡಿವೆ.
ಮೈಸೂರಿನ ರಿಂಗ್ ರೋಡ್ ನಿರ್ಮಾಣ ಮಾಡಿದ್ದು ಎಸ್ ಎಂ ಕೃಷ್ಣ ಅವರು.ರಿಂಗ್ ರೋಡ್ ಗೆ ಅವರ ಹೆಸರಿಡಬೇಕು.
ಮೈಸೂರನ್ನು ಹೆರಿಟೇಜ್ ಸಿಟಿ ಮಾಡಿದ್ದು ಸಹ ಎಸ್ ಎಂ ಕೃಷ್ಣ.
ಪಾರಂಪರಿಕ ನಗರವನ್ನು ಈಗಿನ ಸರ್ಕಾರ ಮುಂದುವರಿಸಿಕೊಂಡು ಹೋಗಬೇಕಿದೆ ಎಂದು ಆಗ್ರಹಿಸಿದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *