ಪೊಲೀಸ್ ಠಾಣೆ ಸಮೀಪದಲ್ಲೇ ಭೀಕರ ಹತ್ಯೆ…ಪುಡಿ ರೌಡಿಗಳ ಅಟ್ಟಹಾಸ…

ಪೊಲೀಸ್ ಠಾಣೆ ಸಮೀಪದಲ್ಲೇ ಭೀಕರ ಹತ್ಯೆ…ಪುಡಿ ರೌಡಿಗಳ ಅಟ್ಟಹಾಸ…

ಮಂಡ್ಯ,ಡಿ12,Tv10 ಕನ್ನಡ

ಹಾಡುಹಗಲೇ ಪೊಲೀಸ್ ಠಾಣೆ ಸಮೀಪ ಪುಡಿರೌಡಿಗಳ ಅಟ್ಟಹಾಸಕ್ಕೆ ಓರ್ವನ ಬಲಿಯಾದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್ ನಲ್ಲಿ ನಡೆದಿದೆ.ಠಾಣೆಯ ಕೂಗಳತೆ ದೂರದಲ್ಲಿ ಬರ್ಭರ ಹತ್ಯೆ ನಡೆದಿದೆ.
ಪೊಲೀಸ್ ಠಾಣೆ ಸಮೀಪ ಇರುವ ಸಂತೆ ಮೈದಾನದ ಬೇಕರಿಯಲ್ಲಿ ಘಟನೆ ನಡೆದಿದೆ.
ಕೆಆರ್‌ನಗರ ತಾಲೂಕಿನ ಬಸವರಾಜಪುರ ಗ್ರಾಮದ ಚೇತನ್ (40) ಕೊಲೆಯಾದ ವ್ಯಕ್ತಿ.
ಸುಮಾರು 10ವರ್ಷಗಳ ಹಿಂದೆ ಬೋರೆಆನಂದೂರು ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದ. 7 ರಿಂದ 8ವರ್ಷದ ಗಂಡು ಮಗು ಇದ್ದು, ಈತ ಹಲವು ವರ್ಷಗಳಿಂದ ಕೆಆರ್‌ಎಸ್‌ನಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ.ಪುಂಡರು ನಡೆಸಿದ ಹಲ್ಲೆಯಿಂದಾಗಿ
ರಕ್ತದ ಮಡುವಿನಲ್ಲಿ ಬಿದ್ದಿದ್ದ ಚೇತನ್ ಗೆ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಾಡುಹಗಲೇ ನಡೆದ ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ.
ಕೆಆರ್‌ಎಸ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ರೌಡಿ ಹಾಗೂ ಪುಡಿರೌಡಿಗಳು ಹೆಚ್ಚಾಗಿದ್ದಾರೆ.ಇದನ್ನ ತಡೆಯುವಲ್ಲಿ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ  ರೌಡಿಗಳನ್ನ ಹತೋಟಿಗೆ ತರುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *