ಪೊಲೀಸ್ ಠಾಣೆ ಸಮೀಪದಲ್ಲೇ ಭೀಕರ ಹತ್ಯೆ…ಪುಡಿ ರೌಡಿಗಳ ಅಟ್ಟಹಾಸ…

ಪೊಲೀಸ್ ಠಾಣೆ ಸಮೀಪದಲ್ಲೇ ಭೀಕರ ಹತ್ಯೆ…ಪುಡಿ ರೌಡಿಗಳ ಅಟ್ಟಹಾಸ…

ಮಂಡ್ಯ,ಡಿ12,Tv10 ಕನ್ನಡ

ಹಾಡುಹಗಲೇ ಪೊಲೀಸ್ ಠಾಣೆ ಸಮೀಪ ಪುಡಿರೌಡಿಗಳ ಅಟ್ಟಹಾಸಕ್ಕೆ ಓರ್ವನ ಬಲಿಯಾದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಕೆ.ಆರ್.ಎಸ್ ನಲ್ಲಿ ನಡೆದಿದೆ.ಠಾಣೆಯ ಕೂಗಳತೆ ದೂರದಲ್ಲಿ ಬರ್ಭರ ಹತ್ಯೆ ನಡೆದಿದೆ.
ಪೊಲೀಸ್ ಠಾಣೆ ಸಮೀಪ ಇರುವ ಸಂತೆ ಮೈದಾನದ ಬೇಕರಿಯಲ್ಲಿ ಘಟನೆ ನಡೆದಿದೆ.
ಕೆಆರ್‌ನಗರ ತಾಲೂಕಿನ ಬಸವರಾಜಪುರ ಗ್ರಾಮದ ಚೇತನ್ (40) ಕೊಲೆಯಾದ ವ್ಯಕ್ತಿ.
ಸುಮಾರು 10ವರ್ಷಗಳ ಹಿಂದೆ ಬೋರೆಆನಂದೂರು ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದ. 7 ರಿಂದ 8ವರ್ಷದ ಗಂಡು ಮಗು ಇದ್ದು, ಈತ ಹಲವು ವರ್ಷಗಳಿಂದ ಕೆಆರ್‌ಎಸ್‌ನಲ್ಲಿ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ.ಪುಂಡರು ನಡೆಸಿದ ಹಲ್ಲೆಯಿಂದಾಗಿ
ರಕ್ತದ ಮಡುವಿನಲ್ಲಿ ಬಿದ್ದಿದ್ದ ಚೇತನ್ ಗೆ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.
ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಹಾಡುಹಗಲೇ ನಡೆದ ಘಟನೆಯಿಂದ ಜನರು ಬೆಚ್ಚಿಬಿದ್ದಿದ್ದಾರೆ.
ಕೆಆರ್‌ಎಸ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ರೌಡಿ ಹಾಗೂ ಪುಡಿರೌಡಿಗಳು ಹೆಚ್ಚಾಗಿದ್ದಾರೆ.ಇದನ್ನ ತಡೆಯುವಲ್ಲಿ ಪೊಲೀಸರು ಸಂಪೂರ್ಣವಾಗಿ ವಿಫಲರಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ  ರೌಡಿಗಳನ್ನ ಹತೋಟಿಗೆ ತರುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *