ಅಪರಾಧ ತಡೆ ಮಾಸಾಚರಣೆ…ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ…ಕುವೆಂಪುನಗರ ಠಾಣೆಯಲ್ಲಿ ಕಾರ್ಯಕ್ರಮ…

ಅಪರಾಧ ತಡೆ ಮಾಸಾಚರಣೆ…ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ…ಕುವೆಂಪುನಗರ ಠಾಣೆಯಲ್ಲಿ ಕಾರ್ಯಕ್ರಮ…

ಮೈಸೂರು,ಡಿ16,Tv10 ಕನ್ನಡ

ಅಪರಾಧ ತಡೆ ಮಾಸಾಚರಣೆ ಹಿನ್ನಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಸೇರಿದಂತೆ ಇತರ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಇತ್ತೀಚೆಗೆ ಹೆಚ್ಚಿನ ಲಾಭದ ಆಮಿಷ ನೀಡಿ ಸಾಮಾಜಿಕ ಜಾಲತಾಣಗಳ ಮೂಲಕ ಹಿರಿಯ ನಾಗರೀಕರನ್ನೇ ಗುರಿಯಾಗಿ ಇಟ್ಟುಕೊಂಡು ವಂಚಕರು ಲಕ್ಷಾಂತರ ರೂಗಳಿಗೆ ಪಂಗನಾಮ ಹಾಕುತ್ತಿರುವ ಪ್ರಕರಣಗಳು ದಾಖಲಾಗುತ್ತಿದೆ.ಈ ಹಿನ್ನಲೆ ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ವಿಶೇಷವಾಗಿ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಾಹಿತಿ ಒದಗಿಸಲಾಯಿತು.ಇದರ ಜೊತೆಗೆ ಕೆಲಸ ಕೊಡುಸುವ ನೆಪದಲ್ಲಿ,ಲಕ್ಕಿಡಿಪ್ ಗಳ ಮೂಲಕ ನಡೆಯುವ ವಂಚನೆ ಬಗ್ಗೆಯೂ ಮಾಹಿತಿ ನೀಡಲಾಯಿತು.ಮನೆಗಳ್ಳತನ,ಸರಗಳ್ಳತನ,ಸಂಚಾರ ನಿಯಮಗಳನ್ನ ಪಾಲಿಸುವ ಕುರಿತಾಗಿ ಜಾಗೃತಿ ಮೂಡಿಸಲಾಯಿತು.ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.ಕುವೆಂಪುನಗರ ಠಾಣಾ ವ್ಯಾಪ್ತಿಯ ನೂರಾರು ಹಿರಿಯ ನಾಗರೀಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪಯುಕ್ತ ಮಾಹಿತಿ ಪಡೆದುಕೊಂಡರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *