ಅಪರಾಧ ತಡೆ ಮಾಸಾಚರಣೆ…ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ…ಕುವೆಂಪುನಗರ ಠಾಣೆಯಲ್ಲಿ ಕಾರ್ಯಕ್ರಮ…

ಅಪರಾಧ ತಡೆ ಮಾಸಾಚರಣೆ…ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ…ಕುವೆಂಪುನಗರ ಠಾಣೆಯಲ್ಲಿ ಕಾರ್ಯಕ್ರಮ…

ಮೈಸೂರು,ಡಿ16,Tv10 ಕನ್ನಡ

ಅಪರಾಧ ತಡೆ ಮಾಸಾಚರಣೆ ಹಿನ್ನಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಸೇರಿದಂತೆ ಇತರ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಇತ್ತೀಚೆಗೆ ಹೆಚ್ಚಿನ ಲಾಭದ ಆಮಿಷ ನೀಡಿ ಸಾಮಾಜಿಕ ಜಾಲತಾಣಗಳ ಮೂಲಕ ಹಿರಿಯ ನಾಗರೀಕರನ್ನೇ ಗುರಿಯಾಗಿ ಇಟ್ಟುಕೊಂಡು ವಂಚಕರು ಲಕ್ಷಾಂತರ ರೂಗಳಿಗೆ ಪಂಗನಾಮ ಹಾಕುತ್ತಿರುವ ಪ್ರಕರಣಗಳು ದಾಖಲಾಗುತ್ತಿದೆ.ಈ ಹಿನ್ನಲೆ ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ವಿಶೇಷವಾಗಿ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಾಹಿತಿ ಒದಗಿಸಲಾಯಿತು.ಇದರ ಜೊತೆಗೆ ಕೆಲಸ ಕೊಡುಸುವ ನೆಪದಲ್ಲಿ,ಲಕ್ಕಿಡಿಪ್ ಗಳ ಮೂಲಕ ನಡೆಯುವ ವಂಚನೆ ಬಗ್ಗೆಯೂ ಮಾಹಿತಿ ನೀಡಲಾಯಿತು.ಮನೆಗಳ್ಳತನ,ಸರಗಳ್ಳತನ,ಸಂಚಾರ ನಿಯಮಗಳನ್ನ ಪಾಲಿಸುವ ಕುರಿತಾಗಿ ಜಾಗೃತಿ ಮೂಡಿಸಲಾಯಿತು.ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.ಕುವೆಂಪುನಗರ ಠಾಣಾ ವ್ಯಾಪ್ತಿಯ ನೂರಾರು ಹಿರಿಯ ನಾಗರೀಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪಯುಕ್ತ ಮಾಹಿತಿ ಪಡೆದುಕೊಂಡರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *