ಅಪರಾಧ ತಡೆ ಮಾಸಾಚರಣೆ…ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ…ಕುವೆಂಪುನಗರ ಠಾಣೆಯಲ್ಲಿ ಕಾರ್ಯಕ್ರಮ…

ಅಪರಾಧ ತಡೆ ಮಾಸಾಚರಣೆ…ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಕುರಿತು ಜಾಗೃತಿ…ಕುವೆಂಪುನಗರ ಠಾಣೆಯಲ್ಲಿ ಕಾರ್ಯಕ್ರಮ…

ಮೈಸೂರು,ಡಿ16,Tv10 ಕನ್ನಡ

ಅಪರಾಧ ತಡೆ ಮಾಸಾಚರಣೆ ಹಿನ್ನಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಸೇರಿದಂತೆ ಇತರ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಇತ್ತೀಚೆಗೆ ಹೆಚ್ಚಿನ ಲಾಭದ ಆಮಿಷ ನೀಡಿ ಸಾಮಾಜಿಕ ಜಾಲತಾಣಗಳ ಮೂಲಕ ಹಿರಿಯ ನಾಗರೀಕರನ್ನೇ ಗುರಿಯಾಗಿ ಇಟ್ಟುಕೊಂಡು ವಂಚಕರು ಲಕ್ಷಾಂತರ ರೂಗಳಿಗೆ ಪಂಗನಾಮ ಹಾಕುತ್ತಿರುವ ಪ್ರಕರಣಗಳು ದಾಖಲಾಗುತ್ತಿದೆ.ಈ ಹಿನ್ನಲೆ ಹಿರಿಯ ನಾಗರೀಕರಿಗೆ ಸೈಬರ್ ಕ್ರೈಂ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ವಿಶೇಷವಾಗಿ ಮುನ್ನೆಚ್ಚರಿಕೆ ವಹಿಸುವ ಬಗ್ಗೆ ಮಾಹಿತಿ ಒದಗಿಸಲಾಯಿತು.ಇದರ ಜೊತೆಗೆ ಕೆಲಸ ಕೊಡುಸುವ ನೆಪದಲ್ಲಿ,ಲಕ್ಕಿಡಿಪ್ ಗಳ ಮೂಲಕ ನಡೆಯುವ ವಂಚನೆ ಬಗ್ಗೆಯೂ ಮಾಹಿತಿ ನೀಡಲಾಯಿತು.ಮನೆಗಳ್ಳತನ,ಸರಗಳ್ಳತನ,ಸಂಚಾರ ನಿಯಮಗಳನ್ನ ಪಾಲಿಸುವ ಕುರಿತಾಗಿ ಜಾಗೃತಿ ಮೂಡಿಸಲಾಯಿತು.ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಅರುಣ್ ರವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.ಕುವೆಂಪುನಗರ ಠಾಣಾ ವ್ಯಾಪ್ತಿಯ ನೂರಾರು ಹಿರಿಯ ನಾಗರೀಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪಯುಕ್ತ ಮಾಹಿತಿ ಪಡೆದುಕೊಂಡರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *