ರಾಜಕೀಯವಾಗಿ ಬೆಳೆಯುತ್ತಿರುವುದಕ್ಕೆ ಅಸೂಯೆ…ಗುಂಪು ಕಟ್ಟಿಕೊಂಡು ದಂಪತಿ ಮೇಲೆ ಹಲ್ಲೆ…ಮಹಿಳೆ ಸೇರಿದಂತೆ 6 ಮಂದಿ ವಿರುದ್ದ FIR ದಾಖಲು…

ರಾಜಕೀಯವಾಗಿ ಬೆಳೆಯುತ್ತಿರುವುದಕ್ಕೆ ಅಸೂಯೆ…ಗುಂಪು ಕಟ್ಟಿಕೊಂಡು ದಂಪತಿ ಮೇಲೆ ಹಲ್ಲೆ…ಮಹಿಳೆ ಸೇರಿದಂತೆ 6 ಮಂದಿ ವಿರುದ್ದ FIR ದಾಖಲು…

ಮೈಸೂರು,ಡಿ17,Tv10 ಕನ್ನಡ

ರಾಜಕೀಯವಾಗಿ ಬೆಳೆಯುತ್ತಿರುವುದನ್ನ ಸಹಿಸದ ಮಹಿಳೆಯೊಬ್ಬಳು ಗುಂಪು ಕಟ್ಟಿಕೊಂಡು ಬಂದು ದಂಪತಿ ಮೇಲೆ ಗೂಂಡಾವರ್ತನೆ ನಡೆಸಿ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ವಿವೇಕಾನಂದ ನಗರದಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ 6 ಮಂದಿ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೆನ್ನಪಟ್ಟಣ ನಗರದ ಪವಿತ್ರಾ ಪ್ರಭಾಕರ್ ರೆಡ್ಡಿ ಹಾಗೂ ಇವರ ಸಹಚರರಾದ ರಂಗಪ್ಪ,ಕೆಂಡಗಣ್ಣ,ಅಭಿ,ಶ್ರೀನಿವಾಸ,ಶಿವು ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿವೇಕಾನಂದ ನಗರದ ನಾಗರತ್ನ ಹಾಗೂ ಇವರ ಪತಿ ಮೊಗಣ್ಣಾಚಾರ್ ಎಂಬುವರೇ ಹಲ್ಲೆಗೆ ಒಳಗಾದ ದಂಪತಿ.

ಮೊಗಣ್ಣಾಚಾರ್ ಹಾಗೂ ಪತ್ನಿ ನಾಗರತ್ನ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.ಸಮಾಜದಲ್ಲಿ ನಡೆಯುವ ಕೆಲವು ಆಗುಹೋಗುಗಳ ಬಗ್ಗೆ ಮೊಗಣ್ಣಾಚಾರ್ ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಾರೆ.ಈ ಬಗ್ಗೆ ಸಾಕಷ್ಟು ಚರ್ಚೆಗಳೂ ಸಹ ನಡೆದಿದೆ.ಮೊಗಣ್ಣಾಚಾರ್ ಏಳಿಗೆಯನ್ನ ಸಹಿಸದ ಪವಿತ್ರಾ ಪ್ರಭಾಕರ್ ರೆಡ್ಡಿ ಏಕಾ ಏಕಿ ನಾಗರತ್ನ ಒಬ್ಬರೇ ಇದ್ದ ಸಮಯದಲ್ಲಿ ತನ್ನ ಪಟಾಲಂ ನ ಕರೆತಂದು ಗುಂಡಾವರ್ತನೆ ನಡೆಸಿ ಪೆಟ್ರೋಲ್ ಹಾಕಿ ಮುಗಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.ಹಲ್ಲೆಗೆ ಒಳಗಾದ ನಾಗರತ್ನ ರವರು ಪವಿತ್ರಾ ರೆಡ್ಡಿ ಸೇರಿದಂತೆ 6 ಮಂದಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *