ರಾಜಕೀಯವಾಗಿ ಬೆಳೆಯುತ್ತಿರುವುದಕ್ಕೆ ಅಸೂಯೆ…ಗುಂಪು ಕಟ್ಟಿಕೊಂಡು ದಂಪತಿ ಮೇಲೆ ಹಲ್ಲೆ…ಮಹಿಳೆ ಸೇರಿದಂತೆ 6 ಮಂದಿ ವಿರುದ್ದ FIR ದಾಖಲು…

ರಾಜಕೀಯವಾಗಿ ಬೆಳೆಯುತ್ತಿರುವುದಕ್ಕೆ ಅಸೂಯೆ…ಗುಂಪು ಕಟ್ಟಿಕೊಂಡು ದಂಪತಿ ಮೇಲೆ ಹಲ್ಲೆ…ಮಹಿಳೆ ಸೇರಿದಂತೆ 6 ಮಂದಿ ವಿರುದ್ದ FIR ದಾಖಲು…

ಮೈಸೂರು,ಡಿ17,Tv10 ಕನ್ನಡ

ರಾಜಕೀಯವಾಗಿ ಬೆಳೆಯುತ್ತಿರುವುದನ್ನ ಸಹಿಸದ ಮಹಿಳೆಯೊಬ್ಬಳು ಗುಂಪು ಕಟ್ಟಿಕೊಂಡು ಬಂದು ದಂಪತಿ ಮೇಲೆ ಗೂಂಡಾವರ್ತನೆ ನಡೆಸಿ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ವಿವೇಕಾನಂದ ನಗರದಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ 6 ಮಂದಿ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೆನ್ನಪಟ್ಟಣ ನಗರದ ಪವಿತ್ರಾ ಪ್ರಭಾಕರ್ ರೆಡ್ಡಿ ಹಾಗೂ ಇವರ ಸಹಚರರಾದ ರಂಗಪ್ಪ,ಕೆಂಡಗಣ್ಣ,ಅಭಿ,ಶ್ರೀನಿವಾಸ,ಶಿವು ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿವೇಕಾನಂದ ನಗರದ ನಾಗರತ್ನ ಹಾಗೂ ಇವರ ಪತಿ ಮೊಗಣ್ಣಾಚಾರ್ ಎಂಬುವರೇ ಹಲ್ಲೆಗೆ ಒಳಗಾದ ದಂಪತಿ.

ಮೊಗಣ್ಣಾಚಾರ್ ಹಾಗೂ ಪತ್ನಿ ನಾಗರತ್ನ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.ಸಮಾಜದಲ್ಲಿ ನಡೆಯುವ ಕೆಲವು ಆಗುಹೋಗುಗಳ ಬಗ್ಗೆ ಮೊಗಣ್ಣಾಚಾರ್ ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಾರೆ.ಈ ಬಗ್ಗೆ ಸಾಕಷ್ಟು ಚರ್ಚೆಗಳೂ ಸಹ ನಡೆದಿದೆ.ಮೊಗಣ್ಣಾಚಾರ್ ಏಳಿಗೆಯನ್ನ ಸಹಿಸದ ಪವಿತ್ರಾ ಪ್ರಭಾಕರ್ ರೆಡ್ಡಿ ಏಕಾ ಏಕಿ ನಾಗರತ್ನ ಒಬ್ಬರೇ ಇದ್ದ ಸಮಯದಲ್ಲಿ ತನ್ನ ಪಟಾಲಂ ನ ಕರೆತಂದು ಗುಂಡಾವರ್ತನೆ ನಡೆಸಿ ಪೆಟ್ರೋಲ್ ಹಾಕಿ ಮುಗಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.ಹಲ್ಲೆಗೆ ಒಳಗಾದ ನಾಗರತ್ನ ರವರು ಪವಿತ್ರಾ ರೆಡ್ಡಿ ಸೇರಿದಂತೆ 6 ಮಂದಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *