ರಾಜಕೀಯವಾಗಿ ಬೆಳೆಯುತ್ತಿರುವುದಕ್ಕೆ ಅಸೂಯೆ…ಗುಂಪು ಕಟ್ಟಿಕೊಂಡು ದಂಪತಿ ಮೇಲೆ ಹಲ್ಲೆ…ಮಹಿಳೆ ಸೇರಿದಂತೆ 6 ಮಂದಿ ವಿರುದ್ದ FIR ದಾಖಲು…

ರಾಜಕೀಯವಾಗಿ ಬೆಳೆಯುತ್ತಿರುವುದಕ್ಕೆ ಅಸೂಯೆ…ಗುಂಪು ಕಟ್ಟಿಕೊಂಡು ದಂಪತಿ ಮೇಲೆ ಹಲ್ಲೆ…ಮಹಿಳೆ ಸೇರಿದಂತೆ 6 ಮಂದಿ ವಿರುದ್ದ FIR ದಾಖಲು…

ಮೈಸೂರು,ಡಿ17,Tv10 ಕನ್ನಡ

ರಾಜಕೀಯವಾಗಿ ಬೆಳೆಯುತ್ತಿರುವುದನ್ನ ಸಹಿಸದ ಮಹಿಳೆಯೊಬ್ಬಳು ಗುಂಪು ಕಟ್ಟಿಕೊಂಡು ಬಂದು ದಂಪತಿ ಮೇಲೆ ಗೂಂಡಾವರ್ತನೆ ನಡೆಸಿ ಹಲ್ಲೆ ಮಾಡಿ ಪ್ರಾಣ ಬೆದರಿಕೆ ಹಾಕಿದ ಘಟನೆ ಮೈಸೂರಿನ ವಿವೇಕಾನಂದ ನಗರದಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ 6 ಮಂದಿ ವಿರುದ್ದ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚೆನ್ನಪಟ್ಟಣ ನಗರದ ಪವಿತ್ರಾ ಪ್ರಭಾಕರ್ ರೆಡ್ಡಿ ಹಾಗೂ ಇವರ ಸಹಚರರಾದ ರಂಗಪ್ಪ,ಕೆಂಡಗಣ್ಣ,ಅಭಿ,ಶ್ರೀನಿವಾಸ,ಶಿವು ಎಂಬುವರ ವಿರುದ್ದ ಪ್ರಕರಣ ದಾಖಲಾಗಿದೆ.ವಿವೇಕಾನಂದ ನಗರದ ನಾಗರತ್ನ ಹಾಗೂ ಇವರ ಪತಿ ಮೊಗಣ್ಣಾಚಾರ್ ಎಂಬುವರೇ ಹಲ್ಲೆಗೆ ಒಳಗಾದ ದಂಪತಿ.

ಮೊಗಣ್ಣಾಚಾರ್ ಹಾಗೂ ಪತ್ನಿ ನಾಗರತ್ನ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.ಸಮಾಜದಲ್ಲಿ ನಡೆಯುವ ಕೆಲವು ಆಗುಹೋಗುಗಳ ಬಗ್ಗೆ ಮೊಗಣ್ಣಾಚಾರ್ ಸಾಮಾಜಿಕ ಜಾಲತಾಣದಲ್ಲಿ ಬರೆಯುತ್ತಾರೆ.ಈ ಬಗ್ಗೆ ಸಾಕಷ್ಟು ಚರ್ಚೆಗಳೂ ಸಹ ನಡೆದಿದೆ.ಮೊಗಣ್ಣಾಚಾರ್ ಏಳಿಗೆಯನ್ನ ಸಹಿಸದ ಪವಿತ್ರಾ ಪ್ರಭಾಕರ್ ರೆಡ್ಡಿ ಏಕಾ ಏಕಿ ನಾಗರತ್ನ ಒಬ್ಬರೇ ಇದ್ದ ಸಮಯದಲ್ಲಿ ತನ್ನ ಪಟಾಲಂ ನ ಕರೆತಂದು ಗುಂಡಾವರ್ತನೆ ನಡೆಸಿ ಪೆಟ್ರೋಲ್ ಹಾಕಿ ಮುಗಿಸುವುದಾಗಿ ಬೆದರಿಕೆ ಹಾಕಿದ್ದಲ್ಲದೆ ದಂಪತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.ಹಲ್ಲೆಗೆ ಒಳಗಾದ ನಾಗರತ್ನ ರವರು ಪವಿತ್ರಾ ರೆಡ್ಡಿ ಸೇರಿದಂತೆ 6 ಮಂದಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *