ಭೂಗಳ್ಳರಿಗೆ ಶಾಕ್…25 ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ವಶಕ್ಕೆ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಭೂಗಳ್ಳರಿಗೆ ಶಾಕ್…25 ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ವಶಕ್ಕೆ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಡಿ20,Tv10 ಕನ್ನಡ

ನಕಲಿ ದಾಖಲೆ ಸೃಷ್ಟಿಸಿಕೊಂಡು ಸರ್ಕಾರಿ ಜಮೀನು ಕಬಳಿಸಿದ್ದ ಭೂಗಳ್ಳರಿಗೆ ಜಿಲ್ಲಾಡಳಿತ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.25 ಕೋಟಿ ಬೆಲೆ ಬಾಳುವ 5 ಎಕ್ರೆ 20 ಗುಂಟೆ ಜಮೀನನ್ನ ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾಧಿಕಾರಿಗಳ ನ್ಯಾಯಾಲಯದ ಪ್ರಕರಣ ಸಂಖ್ಯೆ RP-64/2024 ದಿನಾಂಕ 03-12-2024 ರ ತೀರ್ಪಿನಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಇಂದು ತಮ್ಮ ಸಿಬ್ಬಂದಿಗಳ ಸಮೇತ ಕಾರ್ಯಾಚರಣೆ ನಡೆಸಿ ಜಮೀನನ್ನ ವಶಕ್ಕೆ ಪಡೆದಿದ್ದಾರೆ.ಮೈಸೂರು ತಾಲೂಕು, ಜಯಪುರ ಹೋಬಳಿ, ಕೇರ್ಗಳ್ಳಿ ಗ್ರಾಮದ ಸರ್ವೆ ನಂಬರ್ 60 ರಲ್ಲಿ 5-20 ಗುಂಟೆ ಸರ್ಕಾರಿ ಜಮೀನನ್ನು ಜೂಲೇಗೌಡ ಎಂಬುವವರು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿಸಿಕೊಂಡಿದ್ದರು.ಈ ಸಂಭಂಧ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಾದ ವಿವಾದ ನಡೆಯಿತು.ಸದರಿ ಜಮೀನು ಸರ್ಕಾರಕ್ಕೆ ಸೇರಿದ್ದ ಬಗ್ಗೆ ಖಚಿತವಾದ ಹಿನ್ನಲೆ ವಶಕ್ಕೆ ಪಡೆಯುವಂತೆ ನೀಡಿದ ತೀರ್ಪಿನಂತೆ ಇಂದು ಕಾರ್ಯಾಚರಣೆ ನಡೆಸಿ ಜಮೀನನ್ನ ವಶಪಡಿಸಿಕೊಳ್ಳಲಾಯಿತು.

ಕಾರ್ಯಾಚರಣೆಯಲ್ಲಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಚಿಕ್ಕಣ್ಣ, ಪೊಲೀಸ್ Dy.SP ಕರೀಂ ರಾವತರ್, ಪೊಲೀಸ್ ಸಬ್-ಇನ್ಸ್ಪೆಕ್ಟರ್ ಪ್ರಕಾಶ್ ಇತ್ತಿಮನಿ, ಉಪ ತಹಸಿಲ್ದಾರ್ ಕೆ.ಎಸ್.ಕುಬೇರ, ರಾಜಸ್ವ ನಿರೀಕ್ಷಕ ಸಿ. ವಿ.ಲೋಹಿತ್, ಹಾಗೂ ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *