ಭೂಗಳ್ಳರಿಗೆ ಶಾಕ್…25 ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ವಶಕ್ಕೆ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಭೂಗಳ್ಳರಿಗೆ ಶಾಕ್…25 ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ವಶಕ್ಕೆ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಡಿ20,Tv10 ಕನ್ನಡ

ನಕಲಿ ದಾಖಲೆ ಸೃಷ್ಟಿಸಿಕೊಂಡು ಸರ್ಕಾರಿ ಜಮೀನು ಕಬಳಿಸಿದ್ದ ಭೂಗಳ್ಳರಿಗೆ ಜಿಲ್ಲಾಡಳಿತ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.25 ಕೋಟಿ ಬೆಲೆ ಬಾಳುವ 5 ಎಕ್ರೆ 20 ಗುಂಟೆ ಜಮೀನನ್ನ ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾಧಿಕಾರಿಗಳ ನ್ಯಾಯಾಲಯದ ಪ್ರಕರಣ ಸಂಖ್ಯೆ RP-64/2024 ದಿನಾಂಕ 03-12-2024 ರ ತೀರ್ಪಿನಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಇಂದು ತಮ್ಮ ಸಿಬ್ಬಂದಿಗಳ ಸಮೇತ ಕಾರ್ಯಾಚರಣೆ ನಡೆಸಿ ಜಮೀನನ್ನ ವಶಕ್ಕೆ ಪಡೆದಿದ್ದಾರೆ.ಮೈಸೂರು ತಾಲೂಕು, ಜಯಪುರ ಹೋಬಳಿ, ಕೇರ್ಗಳ್ಳಿ ಗ್ರಾಮದ ಸರ್ವೆ ನಂಬರ್ 60 ರಲ್ಲಿ 5-20 ಗುಂಟೆ ಸರ್ಕಾರಿ ಜಮೀನನ್ನು ಜೂಲೇಗೌಡ ಎಂಬುವವರು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿಸಿಕೊಂಡಿದ್ದರು.ಈ ಸಂಭಂಧ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಾದ ವಿವಾದ ನಡೆಯಿತು.ಸದರಿ ಜಮೀನು ಸರ್ಕಾರಕ್ಕೆ ಸೇರಿದ್ದ ಬಗ್ಗೆ ಖಚಿತವಾದ ಹಿನ್ನಲೆ ವಶಕ್ಕೆ ಪಡೆಯುವಂತೆ ನೀಡಿದ ತೀರ್ಪಿನಂತೆ ಇಂದು ಕಾರ್ಯಾಚರಣೆ ನಡೆಸಿ ಜಮೀನನ್ನ ವಶಪಡಿಸಿಕೊಳ್ಳಲಾಯಿತು.

ಕಾರ್ಯಾಚರಣೆಯಲ್ಲಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಚಿಕ್ಕಣ್ಣ, ಪೊಲೀಸ್ Dy.SP ಕರೀಂ ರಾವತರ್, ಪೊಲೀಸ್ ಸಬ್-ಇನ್ಸ್ಪೆಕ್ಟರ್ ಪ್ರಕಾಶ್ ಇತ್ತಿಮನಿ, ಉಪ ತಹಸಿಲ್ದಾರ್ ಕೆ.ಎಸ್.ಕುಬೇರ, ರಾಜಸ್ವ ನಿರೀಕ್ಷಕ ಸಿ. ವಿ.ಲೋಹಿತ್, ಹಾಗೂ ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *