ಭೂಗಳ್ಳರಿಗೆ ಶಾಕ್…25 ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ವಶಕ್ಕೆ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಭೂಗಳ್ಳರಿಗೆ ಶಾಕ್…25 ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ವಶಕ್ಕೆ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಡಿ20,Tv10 ಕನ್ನಡ

ನಕಲಿ ದಾಖಲೆ ಸೃಷ್ಟಿಸಿಕೊಂಡು ಸರ್ಕಾರಿ ಜಮೀನು ಕಬಳಿಸಿದ್ದ ಭೂಗಳ್ಳರಿಗೆ ಜಿಲ್ಲಾಡಳಿತ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.25 ಕೋಟಿ ಬೆಲೆ ಬಾಳುವ 5 ಎಕ್ರೆ 20 ಗುಂಟೆ ಜಮೀನನ್ನ ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾಧಿಕಾರಿಗಳ ನ್ಯಾಯಾಲಯದ ಪ್ರಕರಣ ಸಂಖ್ಯೆ RP-64/2024 ದಿನಾಂಕ 03-12-2024 ರ ತೀರ್ಪಿನಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಇಂದು ತಮ್ಮ ಸಿಬ್ಬಂದಿಗಳ ಸಮೇತ ಕಾರ್ಯಾಚರಣೆ ನಡೆಸಿ ಜಮೀನನ್ನ ವಶಕ್ಕೆ ಪಡೆದಿದ್ದಾರೆ.ಮೈಸೂರು ತಾಲೂಕು, ಜಯಪುರ ಹೋಬಳಿ, ಕೇರ್ಗಳ್ಳಿ ಗ್ರಾಮದ ಸರ್ವೆ ನಂಬರ್ 60 ರಲ್ಲಿ 5-20 ಗುಂಟೆ ಸರ್ಕಾರಿ ಜಮೀನನ್ನು ಜೂಲೇಗೌಡ ಎಂಬುವವರು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿಸಿಕೊಂಡಿದ್ದರು.ಈ ಸಂಭಂಧ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಾದ ವಿವಾದ ನಡೆಯಿತು.ಸದರಿ ಜಮೀನು ಸರ್ಕಾರಕ್ಕೆ ಸೇರಿದ್ದ ಬಗ್ಗೆ ಖಚಿತವಾದ ಹಿನ್ನಲೆ ವಶಕ್ಕೆ ಪಡೆಯುವಂತೆ ನೀಡಿದ ತೀರ್ಪಿನಂತೆ ಇಂದು ಕಾರ್ಯಾಚರಣೆ ನಡೆಸಿ ಜಮೀನನ್ನ ವಶಪಡಿಸಿಕೊಳ್ಳಲಾಯಿತು.

ಕಾರ್ಯಾಚರಣೆಯಲ್ಲಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಚಿಕ್ಕಣ್ಣ, ಪೊಲೀಸ್ Dy.SP ಕರೀಂ ರಾವತರ್, ಪೊಲೀಸ್ ಸಬ್-ಇನ್ಸ್ಪೆಕ್ಟರ್ ಪ್ರಕಾಶ್ ಇತ್ತಿಮನಿ, ಉಪ ತಹಸಿಲ್ದಾರ್ ಕೆ.ಎಸ್.ಕುಬೇರ, ರಾಜಸ್ವ ನಿರೀಕ್ಷಕ ಸಿ. ವಿ.ಲೋಹಿತ್, ಹಾಗೂ ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *