ಭೂಗಳ್ಳರಿಗೆ ಶಾಕ್…25 ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ವಶಕ್ಕೆ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಭೂಗಳ್ಳರಿಗೆ ಶಾಕ್…25 ಕೋಟಿ ಬೆಲೆ ಬಾಳುವ ಸರ್ಕಾರಿ ಜಮೀನು ವಶಕ್ಕೆ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಡಿ20,Tv10 ಕನ್ನಡ

ನಕಲಿ ದಾಖಲೆ ಸೃಷ್ಟಿಸಿಕೊಂಡು ಸರ್ಕಾರಿ ಜಮೀನು ಕಬಳಿಸಿದ್ದ ಭೂಗಳ್ಳರಿಗೆ ಜಿಲ್ಲಾಡಳಿತ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.25 ಕೋಟಿ ಬೆಲೆ ಬಾಳುವ 5 ಎಕ್ರೆ 20 ಗುಂಟೆ ಜಮೀನನ್ನ ವಶಪಡಿಸಿಕೊಳ್ಳಲಾಗಿದೆ.ಜಿಲ್ಲಾಧಿಕಾರಿಗಳ ನ್ಯಾಯಾಲಯದ ಪ್ರಕರಣ ಸಂಖ್ಯೆ RP-64/2024 ದಿನಾಂಕ 03-12-2024 ರ ತೀರ್ಪಿನಂತೆ ತಹಸೀಲ್ದಾರ್ ಕೆ.ಎಂ.ಮಹೇಶ್ ಕುಮಾರ್ ಇಂದು ತಮ್ಮ ಸಿಬ್ಬಂದಿಗಳ ಸಮೇತ ಕಾರ್ಯಾಚರಣೆ ನಡೆಸಿ ಜಮೀನನ್ನ ವಶಕ್ಕೆ ಪಡೆದಿದ್ದಾರೆ.ಮೈಸೂರು ತಾಲೂಕು, ಜಯಪುರ ಹೋಬಳಿ, ಕೇರ್ಗಳ್ಳಿ ಗ್ರಾಮದ ಸರ್ವೆ ನಂಬರ್ 60 ರಲ್ಲಿ 5-20 ಗುಂಟೆ ಸರ್ಕಾರಿ ಜಮೀನನ್ನು ಜೂಲೇಗೌಡ ಎಂಬುವವರು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಖಾತೆ ಮಾಡಿಸಿಕೊಂಡಿದ್ದರು.ಈ ಸಂಭಂಧ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಾದ ವಿವಾದ ನಡೆಯಿತು.ಸದರಿ ಜಮೀನು ಸರ್ಕಾರಕ್ಕೆ ಸೇರಿದ್ದ ಬಗ್ಗೆ ಖಚಿತವಾದ ಹಿನ್ನಲೆ ವಶಕ್ಕೆ ಪಡೆಯುವಂತೆ ನೀಡಿದ ತೀರ್ಪಿನಂತೆ ಇಂದು ಕಾರ್ಯಾಚರಣೆ ನಡೆಸಿ ಜಮೀನನ್ನ ವಶಪಡಿಸಿಕೊಳ್ಳಲಾಯಿತು.

ಕಾರ್ಯಾಚರಣೆಯಲ್ಲಿ ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಚಿಕ್ಕಣ್ಣ, ಪೊಲೀಸ್ Dy.SP ಕರೀಂ ರಾವತರ್, ಪೊಲೀಸ್ ಸಬ್-ಇನ್ಸ್ಪೆಕ್ಟರ್ ಪ್ರಕಾಶ್ ಇತ್ತಿಮನಿ, ಉಪ ತಹಸಿಲ್ದಾರ್ ಕೆ.ಎಸ್.ಕುಬೇರ, ರಾಜಸ್ವ ನಿರೀಕ್ಷಕ ಸಿ. ವಿ.ಲೋಹಿತ್, ಹಾಗೂ ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು ಹಾಜರಿದ್ದರು…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *