ಮಹಿಳಾ ಪ್ರಯಾಣಿಕರ ಜೊತೆ ನಿರ್ವಾಹಕನ ಅನುಚಿತ ವರ್ತನೆ…ಮಹಿಳೆಯ ವಿಡಿಯೋ ಚಿತ್ರೀಕರಣ ಆರೋಪ…ಡಿಪೋ ಮ್ಯಾನೇಜರ್ ಗೆ ದೂರು…

ಮಹಿಳಾ ಪ್ರಯಾಣಿಕರ ಜೊತೆ ನಿರ್ವಾಹಕನ ಅನುಚಿತ ವರ್ತನೆ…ಮಹಿಳೆಯ ವಿಡಿಯೋ ಚಿತ್ರೀಕರಣ ಆರೋಪ…ಡಿಪೋ ಮ್ಯಾನೇಜರ್ ಗೆ ದೂರು…

ನಂಜನಗೂಡು,ಡಿ21,Tv10 ಕನ್ನಡ

ಮಹಿಳಾ ಪ್ರಯಾಣಿಕರೊಂದಿಗೆ ಕೆಎಸ್ ಆರ್ ಟಿಸಿ ಬಸಿ ನಿರ್ವಾಹಕನ ವಿರುದ್ದ ಸಂಘಟಕರು ಡಿಪೋ ಮ್ಯಾನೇಜರ್ ಗೆ ದೂರು ನೀಡಿದ್ದಾರೆ.ನಂಜನಗೂಡಿನಿಂದ ಚಿಕ್ಕಬರಗಿ ಗ್ರಾಮಕ್ಕೆ ತೆರಳುವ ಬಸ್ ಸಂಖ್ಯೆ KA59 F 0879 ನ ಚಾಲಕ ಹಾಗೂ ನಿರ್ವಾಹಕ ಮಂಜುನಾಥ್ ವಿರುದ್ದ ದೂರು ನೀಡಲಾಗಿದೆ.ಮಹಿಳೆಯೊಬ್ಬರೊಂದಿಗೆ ಮಾತನಾಡುವಾಗ ಅಶ್ಲೀಲ ಪದ ಬಳಸಿ ಆಕೆಯ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡಿದ್ದಾರೆಂದು ಆರೋಪಿಸಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

ದಿನಾಂಕ 20-12-2024 ರಂದು ಸರ್ಕಾರಿ ಬಸ್ ಹೆಡಿಯಾಲ ಸಮೀಪ ನಿಳಲಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಮುಂಭಾಗ ಸಾಗಿದೆ.ಬಸ್ ಗಾಗಿ ಕಾದಿದ್ದ ಶಾಲೆ ಸಿಬ್ಬಂದಿ ನಾಗಮ್ಮ ರವರು ನಿಲ್ಲಿಸುವಂತೆ ಕೈ ತೋರಿಸಿದ್ದಾರೆ.ಚಾಲಕ ಸ್ವಲ್ಪದೂರ ಸಾಗಿ ಬಸ್ ನಿಲ್ಲಿಸಿದ್ದಾನೆ.ಈ ಬಗ್ಗೆ ಪ್ರಶ್ನಿಸಿದಾಗ ಮಹಿಳೆ ಎಂದು ಪರಿಗಣಿಸದೆ ಅಶ್ಲೀಲ ಪದ ಬಳಕೆ ಮಾಡಿ ನಿಂದಿಸಿದ್ದಾನೆ.ನಂತರ ಬಸ್ ನಿಂತವ ಮೇಲೆ ನಾಗಮ್ಮ ರವರ ಫೋಟೋ ಮತ್ತು ವಿಡಿಯೋ ಗಳನ್ನ ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾನೆ.ಈ ವಿಚಾರವನ್ನ ನಾಗಮ್ಮ ತಮ್ಮ ಪತಿ ಮಹದೇವಸ್ವಾಮಿಗೆ ತಿಳಿಸಿದ್ದಾರೆ.ಕೂಡಲೇ ಸಂಘಟಕರ ನೆರವಿನಿಂದ ಮಹದೇವಸ್ವಾಮಿ ನಂಜನಗೂಡು ಘಟಕದ ಬಸ್ ಡಿಪೋ ಮ್ಯಾನೇಜರ್ ಗೆ ದೂರು ನೀಡಿದ್ದಾರೆ.ಮಂಜುನಾಥ್ ಗೆ ಚಾಲಕರೂ ಸಹಕರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು ಇಬ್ಬರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಸಧ್ಯ ಡಿಪೋ ಮ್ಯಾನೇಜರ್ ಮಂಜುನಾಥ್ ರವರ ಮೊಬೈಲ್ ವಶಕ್ಕೆ ಪಡೆದಿದ್ದಾರೆ.ಪರಿಶೀಲನೆ ನಂತರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ…

Spread the love

Related post

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…

Leave a Reply

Your email address will not be published. Required fields are marked *