ಅನಿವಾಸಿ ಭಾರತೀಯರಿಂದ ಗೀತ ಪಠಣ…ಗಣಪತಿ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ…

ಅನಿವಾಸಿ ಭಾರತೀಯರಿಂದ ಗೀತ ಪಠಣ…ಗಣಪತಿ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ…

ಕುರುಕ್ಷೇತ್ರ,ಡಿ25,Tv10 ಕನ್ನಡ

ಹರಿಯಾಣ ರಾಜ್ಯದ ಕುರುಕ್ಷೇತ್ರದಲ್ಲಿ ನೂರಾರು ಅನಿವಾಸಿ ಭಾರತೀಯರು ಸಂಪೂರ್ಣ ಗೀತ ಪಠನ ನಡೆಸಿದರು. ಭಗವದ್ಗೀತೆಯ ಜನ್ಮಸ್ಥಳವಾದ ಕುರುಕ್ಷೇತ್ರದಲ್ಲೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗುರು ಮಹೋತ್ಸ್‌ವ ಸ್ಮರಣೆಯೊಂದಿಗೆ ಕಾರ್ಯಕ್ರಮವನ್ನು ಅಭೂತಪೂರ್ವ ಯಶಸ್ವಿಗೊಳಿಸಿದರು.
ಅಮೇರಿಕಾ, ಕೆನಡಾ, ಟ್ರಿನಿಡಾಡ್ ಮತ್ತು ಟೊಬಾಗೊ, ಯುಕೆ, ಜರ್ಮನಿ, ಸ್ವಿಟ್ಜರ್ಲೆಂಡ್, ಯುಎಇ, ಕುವೈತ್, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ 400 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಗುರು ಮಹೋತ್ಸ್‌ವ ಸ್ಮರಣೆಯೊಂದಿಗೆ ಸಂಪೂರ್ಣ ಗೀತೆಯನ್ನು ಪಠಿಸಿ ಅನನ್ಯ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಕುರುಕ್ಷೇತ್ರದಲ್ಲಿ ಈ ಅಭೂತಪೂರ್ವ ಕಾರ್ಯಕ್ರಮವು ಮೈಸೂರಿನ ಅವಧೂತ ದತ್ತಪೀಠದ ಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದತೀರ್ಥ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನೆರವೇರಿತು.ಹರಿಯಾಣ ರಾಜ್ಯಪಾಲರಾದ ಬಂಡಾರು ದತ್ತಾತ್ರೆಯ ಅವರು ಕಾರ್ಯಕ್ರಮನ್ನು ಉದ್ಘಾಟಿಸಿ,ಶ್ರೀಗಳ ಆಶೀರ್ವಾದ ಪಡೆದರು.

ಕುರುಕ್ಷೇತ್ರ ಯುದ್ದ ನಡೆದಾಗ ಭಗವಾನ್ ಶ್ರೀಕೃಷ್ಣನು ತನ್ನ ಅತ್ಯಾಪ್ತ ಪ್ರಿಯ ಭಕ್ತ ಅರ್ಜುನನಿಗೆ ಬೋದಿಸಿದ ಗೀತೆ ಹುಟ್ಟಿದ ಪುಣ್ಯ ಸ್ಥಳ ಈಗಿನ ಹರಿಯಾಣ ರಾಜ್ಯದ ಕುರುಕ್ಷೇತ್ರ ನಗರ.ಇಂದು ಇದೇ ನಗರದಲ್ಲಿ ಗೀತ ಪಠಣ ಕಾರ್ಯಕ್ರಮ ನಡೆದಿರುವುದು ನಮ್ಮ ನಗರ ಹಾಗೂ ದೇಶದ ಪುಣ್ಯ ಎಂದು ಈ ವೇಳೆ ಗಣ್ಯರು ಬಣ್ಣಿಸಿದರು.
ಇಂತಹ ಅಪೂರ್ವ ಗೀತಾ ಕಂಠಸ್ಥ ಮಾಡಿಸಲು ಪೂಜ್ಯ ಶ್ರೀ ಸ್ವಾಮೀಜಿಯವರ ದರ್ಶನವಾದ ಎಸ್ ಜಿ ಎಸ್ ಗೀತಾ ಪ್ರತಿಷ್ಠಾನವು ಶ್ರಮಿಸುತ್ತಿರುವುದು ನಿಜಕ್ಕೂ ಸ್ವಾಗತಾರ್ಹ, ಈ ಮೂಲಕ ಗೀತೆಯನ್ನು ನಾವು ಆಲಿಸುತ್ತಿರುವುದು ನಮ್ಮ ಪುಣ್ಯ ಎಂದು ಶ್ಲಾಘಿಸಿದರು…

Spread the love

Related post

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…

Leave a Reply

Your email address will not be published. Required fields are marked *