ಅನಿವಾಸಿ ಭಾರತೀಯರಿಂದ ಗೀತ ಪಠಣ…ಗಣಪತಿ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ…

ಅನಿವಾಸಿ ಭಾರತೀಯರಿಂದ ಗೀತ ಪಠಣ…ಗಣಪತಿ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ…

ಕುರುಕ್ಷೇತ್ರ,ಡಿ25,Tv10 ಕನ್ನಡ

ಹರಿಯಾಣ ರಾಜ್ಯದ ಕುರುಕ್ಷೇತ್ರದಲ್ಲಿ ನೂರಾರು ಅನಿವಾಸಿ ಭಾರತೀಯರು ಸಂಪೂರ್ಣ ಗೀತ ಪಠನ ನಡೆಸಿದರು. ಭಗವದ್ಗೀತೆಯ ಜನ್ಮಸ್ಥಳವಾದ ಕುರುಕ್ಷೇತ್ರದಲ್ಲೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗುರು ಮಹೋತ್ಸ್‌ವ ಸ್ಮರಣೆಯೊಂದಿಗೆ ಕಾರ್ಯಕ್ರಮವನ್ನು ಅಭೂತಪೂರ್ವ ಯಶಸ್ವಿಗೊಳಿಸಿದರು.
ಅಮೇರಿಕಾ, ಕೆನಡಾ, ಟ್ರಿನಿಡಾಡ್ ಮತ್ತು ಟೊಬಾಗೊ, ಯುಕೆ, ಜರ್ಮನಿ, ಸ್ವಿಟ್ಜರ್ಲೆಂಡ್, ಯುಎಇ, ಕುವೈತ್, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ 400 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಗುರು ಮಹೋತ್ಸ್‌ವ ಸ್ಮರಣೆಯೊಂದಿಗೆ ಸಂಪೂರ್ಣ ಗೀತೆಯನ್ನು ಪಠಿಸಿ ಅನನ್ಯ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಕುರುಕ್ಷೇತ್ರದಲ್ಲಿ ಈ ಅಭೂತಪೂರ್ವ ಕಾರ್ಯಕ್ರಮವು ಮೈಸೂರಿನ ಅವಧೂತ ದತ್ತಪೀಠದ ಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದತೀರ್ಥ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನೆರವೇರಿತು.ಹರಿಯಾಣ ರಾಜ್ಯಪಾಲರಾದ ಬಂಡಾರು ದತ್ತಾತ್ರೆಯ ಅವರು ಕಾರ್ಯಕ್ರಮನ್ನು ಉದ್ಘಾಟಿಸಿ,ಶ್ರೀಗಳ ಆಶೀರ್ವಾದ ಪಡೆದರು.

ಕುರುಕ್ಷೇತ್ರ ಯುದ್ದ ನಡೆದಾಗ ಭಗವಾನ್ ಶ್ರೀಕೃಷ್ಣನು ತನ್ನ ಅತ್ಯಾಪ್ತ ಪ್ರಿಯ ಭಕ್ತ ಅರ್ಜುನನಿಗೆ ಬೋದಿಸಿದ ಗೀತೆ ಹುಟ್ಟಿದ ಪುಣ್ಯ ಸ್ಥಳ ಈಗಿನ ಹರಿಯಾಣ ರಾಜ್ಯದ ಕುರುಕ್ಷೇತ್ರ ನಗರ.ಇಂದು ಇದೇ ನಗರದಲ್ಲಿ ಗೀತ ಪಠಣ ಕಾರ್ಯಕ್ರಮ ನಡೆದಿರುವುದು ನಮ್ಮ ನಗರ ಹಾಗೂ ದೇಶದ ಪುಣ್ಯ ಎಂದು ಈ ವೇಳೆ ಗಣ್ಯರು ಬಣ್ಣಿಸಿದರು.
ಇಂತಹ ಅಪೂರ್ವ ಗೀತಾ ಕಂಠಸ್ಥ ಮಾಡಿಸಲು ಪೂಜ್ಯ ಶ್ರೀ ಸ್ವಾಮೀಜಿಯವರ ದರ್ಶನವಾದ ಎಸ್ ಜಿ ಎಸ್ ಗೀತಾ ಪ್ರತಿಷ್ಠಾನವು ಶ್ರಮಿಸುತ್ತಿರುವುದು ನಿಜಕ್ಕೂ ಸ್ವಾಗತಾರ್ಹ, ಈ ಮೂಲಕ ಗೀತೆಯನ್ನು ನಾವು ಆಲಿಸುತ್ತಿರುವುದು ನಮ್ಮ ಪುಣ್ಯ ಎಂದು ಶ್ಲಾಘಿಸಿದರು…

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *