ಅನಿವಾಸಿ ಭಾರತೀಯರಿಂದ ಗೀತ ಪಠಣ…ಗಣಪತಿ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ…

ಅನಿವಾಸಿ ಭಾರತೀಯರಿಂದ ಗೀತ ಪಠಣ…ಗಣಪತಿ ಶ್ರೀಗಳ ಸಾನಿಧ್ಯದಲ್ಲಿ ಕಾರ್ಯಕ್ರಮ…

ಕುರುಕ್ಷೇತ್ರ,ಡಿ25,Tv10 ಕನ್ನಡ

ಹರಿಯಾಣ ರಾಜ್ಯದ ಕುರುಕ್ಷೇತ್ರದಲ್ಲಿ ನೂರಾರು ಅನಿವಾಸಿ ಭಾರತೀಯರು ಸಂಪೂರ್ಣ ಗೀತ ಪಠನ ನಡೆಸಿದರು. ಭಗವದ್ಗೀತೆಯ ಜನ್ಮಸ್ಥಳವಾದ ಕುರುಕ್ಷೇತ್ರದಲ್ಲೇ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗುರು ಮಹೋತ್ಸ್‌ವ ಸ್ಮರಣೆಯೊಂದಿಗೆ ಕಾರ್ಯಕ್ರಮವನ್ನು ಅಭೂತಪೂರ್ವ ಯಶಸ್ವಿಗೊಳಿಸಿದರು.
ಅಮೇರಿಕಾ, ಕೆನಡಾ, ಟ್ರಿನಿಡಾಡ್ ಮತ್ತು ಟೊಬಾಗೊ, ಯುಕೆ, ಜರ್ಮನಿ, ಸ್ವಿಟ್ಜರ್ಲೆಂಡ್, ಯುಎಇ, ಕುವೈತ್, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನ 400 ಕ್ಕೂ ಹೆಚ್ಚು ಅನಿವಾಸಿ ಭಾರತೀಯರು ಗುರು ಮಹೋತ್ಸ್‌ವ ಸ್ಮರಣೆಯೊಂದಿಗೆ ಸಂಪೂರ್ಣ ಗೀತೆಯನ್ನು ಪಠಿಸಿ ಅನನ್ಯ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಕುರುಕ್ಷೇತ್ರದಲ್ಲಿ ಈ ಅಭೂತಪೂರ್ವ ಕಾರ್ಯಕ್ರಮವು ಮೈಸೂರಿನ ಅವಧೂತ ದತ್ತಪೀಠದ ಪೀಠಾಧಿಪತಿ ಪೂಜ್ಯ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಮತ್ತು ಕಿರಿಯ ಶ್ರೀಗಳಾದ ಶ್ರೀ ದತ್ತ ವಿಜಯಾನಂದತೀರ್ಥ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನೆರವೇರಿತು.ಹರಿಯಾಣ ರಾಜ್ಯಪಾಲರಾದ ಬಂಡಾರು ದತ್ತಾತ್ರೆಯ ಅವರು ಕಾರ್ಯಕ್ರಮನ್ನು ಉದ್ಘಾಟಿಸಿ,ಶ್ರೀಗಳ ಆಶೀರ್ವಾದ ಪಡೆದರು.

ಕುರುಕ್ಷೇತ್ರ ಯುದ್ದ ನಡೆದಾಗ ಭಗವಾನ್ ಶ್ರೀಕೃಷ್ಣನು ತನ್ನ ಅತ್ಯಾಪ್ತ ಪ್ರಿಯ ಭಕ್ತ ಅರ್ಜುನನಿಗೆ ಬೋದಿಸಿದ ಗೀತೆ ಹುಟ್ಟಿದ ಪುಣ್ಯ ಸ್ಥಳ ಈಗಿನ ಹರಿಯಾಣ ರಾಜ್ಯದ ಕುರುಕ್ಷೇತ್ರ ನಗರ.ಇಂದು ಇದೇ ನಗರದಲ್ಲಿ ಗೀತ ಪಠಣ ಕಾರ್ಯಕ್ರಮ ನಡೆದಿರುವುದು ನಮ್ಮ ನಗರ ಹಾಗೂ ದೇಶದ ಪುಣ್ಯ ಎಂದು ಈ ವೇಳೆ ಗಣ್ಯರು ಬಣ್ಣಿಸಿದರು.
ಇಂತಹ ಅಪೂರ್ವ ಗೀತಾ ಕಂಠಸ್ಥ ಮಾಡಿಸಲು ಪೂಜ್ಯ ಶ್ರೀ ಸ್ವಾಮೀಜಿಯವರ ದರ್ಶನವಾದ ಎಸ್ ಜಿ ಎಸ್ ಗೀತಾ ಪ್ರತಿಷ್ಠಾನವು ಶ್ರಮಿಸುತ್ತಿರುವುದು ನಿಜಕ್ಕೂ ಸ್ವಾಗತಾರ್ಹ, ಈ ಮೂಲಕ ಗೀತೆಯನ್ನು ನಾವು ಆಲಿಸುತ್ತಿರುವುದು ನಮ್ಮ ಪುಣ್ಯ ಎಂದು ಶ್ಲಾಘಿಸಿದರು…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *