ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ…ಅಣ್ಣನೂ ನೇಣಿಗೆ…

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ…ಅಣ್ಣನೂ ನೇಣಿಗೆ…

ಪಿರಿಯಾಪಟ್ಟಣ,ಡಿ27,Tv10 ಕನ್ನಡ

ಎಲ್ಐಸಿ ಹಣದ ಆಸೆಗಾಗಿ ಹೆತ್ತ ಅಪ್ಪನನ್ನೇ ಕೊಂದ ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ತಂದೆಯ ಸಾವಿನ ಹಿನ್ನಲೆ ಬೇಸತ್ತ ಸಹೋದರ ನೇಣಿಗೆ ಶರಣಾಗಿದ್ದಾನೆ.
ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಪಾಂಡು ತಂದೆಯನ್ನ ಕೊಂದ ಪಾಪಿ ಮಗ.
ಅಪ್ಪ ಹಾಗೂ ಅಣ್ಣನ ಹೆಸರಲ್ಲಿ ಪಾಂಡು ವಿಮೆ ಮಾಡಿಸಿದ್ದ.ಇನ್ಶುರೆನ್ಸ್ ಹಣಕ್ಕಾಗಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಅಪ್ಪನನ್ನ ಟಿಬೇಟಿಯನ್ ಕ್ಯಾಂಪಿನಲ್ಲಿ ಕೆಲಸ ಇದೆ ಹೋಗು ಅಂತಾ ಕಳುಹಿಸಿ ಹಿಂಬದಿಯಿಂದ ಹಿಂಬಾಲಿಸು ದೊಣ್ಣೆಯಿಂದ ತಲೆಗೆ ಹೊಡೆದು ಅಪಘಾತವೆಂಬಂತೆ ಬಿಂಬಿಸಿ ಬಿ ಎಂ ರಸ್ತೆಯ ಮಂಚ ದೇವನಹಳ್ಳಿ ಸಮೀಪ ಶವ ಬಿಸಾಡಿದ್ದ.
ನಂತರ ಬೈಲುಕುಪ್ಪೆ ಪೊಲೀಸರಿಗೆ ನಮ್ಮ ಅಪ್ಪನಿಗೆ ಅಪರಿಚಿತವಾದ ವಾಹನ ಡಿಕ್ಕಿಯಾಗಿ ಸಾವನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದ.
ಘಟನೆಯಿಂದ ಅನುಮಾನಗೊಂಡು
ತನಿಖೆ ನಡೆಸಿದ ಸಬ್ ಇನ್ಸ್ಪೆಕ್ಟರ್ ಅಜಯ್ ಕುಮಾರ್ ಮತ್ತು ತಂಡ. ಪಾಂಡು ಸಂಚು ಬಯಲಾಗಿದೆ.
ವಿಚಾರಣೆ ನಡೆಸಿದಾಗ ಆರೋಪಿ ಕೊಲೆ ಮಾಡಿರೋದಾಗಿ ಒಪ್ಪಿಕೊಂಡಿದ್ದಾನೆ.
ನನ್ನ ತಂದೆ ಹೆಸರಿನಲ್ಲಿ ಇನ್ಸೂರೆನ್ಸ್ ವಿಮೆಯಿದೆ ಅಪಘಾತದಲ್ಲಿ ಸಾವನಪ್ಪಿದ್ರೆ ಡಬಲ್ ಹಣ ಸಿಗುವ ಆಸೆಯಲ್ಲಿ ಈ ಕೃತ್ಯ ಮಾಡಿದ್ದೇನೆ ಎಂದು ತಿಳಿಸಿದ್ದಾನೆ.
ತಂದೆ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅಣ್ಣನಾದ ಧರ್ಮ ಕೂಡ ನೇಣಿಗೆ ಶರಣಾಗಿದ್ದಾನೆ.
ಆರೋಪಿಯನ್ನ ವಶಪಡಿಸಿಕೊಂಡಿರುವ ಬೈಲುಕೊಪ್ಪೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ…

Spread the love

Related post

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ…

ಪತಿ ಮೂಗ…ಪತ್ನಿ ಮೂಗಿ…ಪ್ರಿಯಕರ ಮೂಗ…ಸಹಚರ ಮೂಗ…ಮಾತು ಬಾರದಿದ್ರೂ ವಿಡಿಯೋ ಕಾಲ್ ಮೂಲಕವೇ ಶುರುವಾಯ್ತು ಅಕ್ರಮ ಸಂಬಂಧ…ಪತಿ ಕೊಲೆಯಲ್ಲಿ ಅಂತ್ಯ…ನಿಗೂಢ ಕೊಲೆ ರಹಸ್ಯ ಭೇಧಿಸಿದ ನಂಜನಗೂಡು ಪೊಲೀಸರು… ನಂಜನಗೂಡು,ಏ9,Tv10 ಕನ್ನಡ…
ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್.

ಮೈಸೂರು ನ್ಯಾಯಾಲಯದಲ್ಲಿ ಪ್ರಕರಣ: ಡಿಸಿ ಬಂಧನ ನೋಟಿಸ್ ಹಿಂಪಡೆದ ಕೋರ್ಟ್. ಮೈಸೂರು, ಏಪ್ರಿಲ್ 8: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಕ್ಸ್‌ಕ್ಯೂಷನ್ ಕೇಸ್…
ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ..

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ…

ಅಮೆರಿಕದ ವಿವಿ ಉಪಕುಲಪತಿಯಾಗಿ ಯೋಗ ಗುರು ಡಾಕ್ಟರ್ ಕೆ ರಾಘವೇಂದ್ರ ಪೈ ನೇಮಕ…ಕೆಎಂಪಿಕೆ ಟ್ರಸ್ಟ್ ನಿಂದ ಸನ್ಮಾನ.. ಮೈಸೂರು,ಏ8,Tv10 ಕನ್ನಡ ಖ್ಯಾತ ಯೋಗ ಗುರು ಡಾಕ್ಟರ್ ರಾಘವೇಂದ್ರ ಪೈ…

Leave a Reply

Your email address will not be published. Required fields are marked *