ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ…ಅಣ್ಣನೂ ನೇಣಿಗೆ…

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ…ಅಣ್ಣನೂ ನೇಣಿಗೆ…

ಪಿರಿಯಾಪಟ್ಟಣ,ಡಿ27,Tv10 ಕನ್ನಡ

ಎಲ್ಐಸಿ ಹಣದ ಆಸೆಗಾಗಿ ಹೆತ್ತ ಅಪ್ಪನನ್ನೇ ಕೊಂದ ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ತಂದೆಯ ಸಾವಿನ ಹಿನ್ನಲೆ ಬೇಸತ್ತ ಸಹೋದರ ನೇಣಿಗೆ ಶರಣಾಗಿದ್ದಾನೆ.
ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಪಾಂಡು ತಂದೆಯನ್ನ ಕೊಂದ ಪಾಪಿ ಮಗ.
ಅಪ್ಪ ಹಾಗೂ ಅಣ್ಣನ ಹೆಸರಲ್ಲಿ ಪಾಂಡು ವಿಮೆ ಮಾಡಿಸಿದ್ದ.ಇನ್ಶುರೆನ್ಸ್ ಹಣಕ್ಕಾಗಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಅಪ್ಪನನ್ನ ಟಿಬೇಟಿಯನ್ ಕ್ಯಾಂಪಿನಲ್ಲಿ ಕೆಲಸ ಇದೆ ಹೋಗು ಅಂತಾ ಕಳುಹಿಸಿ ಹಿಂಬದಿಯಿಂದ ಹಿಂಬಾಲಿಸು ದೊಣ್ಣೆಯಿಂದ ತಲೆಗೆ ಹೊಡೆದು ಅಪಘಾತವೆಂಬಂತೆ ಬಿಂಬಿಸಿ ಬಿ ಎಂ ರಸ್ತೆಯ ಮಂಚ ದೇವನಹಳ್ಳಿ ಸಮೀಪ ಶವ ಬಿಸಾಡಿದ್ದ.
ನಂತರ ಬೈಲುಕುಪ್ಪೆ ಪೊಲೀಸರಿಗೆ ನಮ್ಮ ಅಪ್ಪನಿಗೆ ಅಪರಿಚಿತವಾದ ವಾಹನ ಡಿಕ್ಕಿಯಾಗಿ ಸಾವನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದ.
ಘಟನೆಯಿಂದ ಅನುಮಾನಗೊಂಡು
ತನಿಖೆ ನಡೆಸಿದ ಸಬ್ ಇನ್ಸ್ಪೆಕ್ಟರ್ ಅಜಯ್ ಕುಮಾರ್ ಮತ್ತು ತಂಡ. ಪಾಂಡು ಸಂಚು ಬಯಲಾಗಿದೆ.
ವಿಚಾರಣೆ ನಡೆಸಿದಾಗ ಆರೋಪಿ ಕೊಲೆ ಮಾಡಿರೋದಾಗಿ ಒಪ್ಪಿಕೊಂಡಿದ್ದಾನೆ.
ನನ್ನ ತಂದೆ ಹೆಸರಿನಲ್ಲಿ ಇನ್ಸೂರೆನ್ಸ್ ವಿಮೆಯಿದೆ ಅಪಘಾತದಲ್ಲಿ ಸಾವನಪ್ಪಿದ್ರೆ ಡಬಲ್ ಹಣ ಸಿಗುವ ಆಸೆಯಲ್ಲಿ ಈ ಕೃತ್ಯ ಮಾಡಿದ್ದೇನೆ ಎಂದು ತಿಳಿಸಿದ್ದಾನೆ.
ತಂದೆ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅಣ್ಣನಾದ ಧರ್ಮ ಕೂಡ ನೇಣಿಗೆ ಶರಣಾಗಿದ್ದಾನೆ.
ಆರೋಪಿಯನ್ನ ವಶಪಡಿಸಿಕೊಂಡಿರುವ ಬೈಲುಕೊಪ್ಪೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *