ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ…ಅಣ್ಣನೂ ನೇಣಿಗೆ…

ವಿಮೆ ಹಣಕ್ಕಾಗಿ ತಂದೆಯನ್ನೇ ಕೊಂದ ಪಾಪಿ ಮಗ…ಅಣ್ಣನೂ ನೇಣಿಗೆ…

ಪಿರಿಯಾಪಟ್ಟಣ,ಡಿ27,Tv10 ಕನ್ನಡ

ಎಲ್ಐಸಿ ಹಣದ ಆಸೆಗಾಗಿ ಹೆತ್ತ ಅಪ್ಪನನ್ನೇ ಕೊಂದ ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ತಂದೆಯ ಸಾವಿನ ಹಿನ್ನಲೆ ಬೇಸತ್ತ ಸಹೋದರ ನೇಣಿಗೆ ಶರಣಾಗಿದ್ದಾನೆ.
ಪಿರಿಯಾಪಟ್ಟಣ ತಾಲೂಕಿನ ಕೊಪ್ಪ ಗ್ರಾಮದ ಗೆರೋಸಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಪಾಂಡು ತಂದೆಯನ್ನ ಕೊಂದ ಪಾಪಿ ಮಗ.
ಅಪ್ಪ ಹಾಗೂ ಅಣ್ಣನ ಹೆಸರಲ್ಲಿ ಪಾಂಡು ವಿಮೆ ಮಾಡಿಸಿದ್ದ.ಇನ್ಶುರೆನ್ಸ್ ಹಣಕ್ಕಾಗಿ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ.
ಅಪ್ಪನನ್ನ ಟಿಬೇಟಿಯನ್ ಕ್ಯಾಂಪಿನಲ್ಲಿ ಕೆಲಸ ಇದೆ ಹೋಗು ಅಂತಾ ಕಳುಹಿಸಿ ಹಿಂಬದಿಯಿಂದ ಹಿಂಬಾಲಿಸು ದೊಣ್ಣೆಯಿಂದ ತಲೆಗೆ ಹೊಡೆದು ಅಪಘಾತವೆಂಬಂತೆ ಬಿಂಬಿಸಿ ಬಿ ಎಂ ರಸ್ತೆಯ ಮಂಚ ದೇವನಹಳ್ಳಿ ಸಮೀಪ ಶವ ಬಿಸಾಡಿದ್ದ.
ನಂತರ ಬೈಲುಕುಪ್ಪೆ ಪೊಲೀಸರಿಗೆ ನಮ್ಮ ಅಪ್ಪನಿಗೆ ಅಪರಿಚಿತವಾದ ವಾಹನ ಡಿಕ್ಕಿಯಾಗಿ ಸಾವನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದ.
ಘಟನೆಯಿಂದ ಅನುಮಾನಗೊಂಡು
ತನಿಖೆ ನಡೆಸಿದ ಸಬ್ ಇನ್ಸ್ಪೆಕ್ಟರ್ ಅಜಯ್ ಕುಮಾರ್ ಮತ್ತು ತಂಡ. ಪಾಂಡು ಸಂಚು ಬಯಲಾಗಿದೆ.
ವಿಚಾರಣೆ ನಡೆಸಿದಾಗ ಆರೋಪಿ ಕೊಲೆ ಮಾಡಿರೋದಾಗಿ ಒಪ್ಪಿಕೊಂಡಿದ್ದಾನೆ.
ನನ್ನ ತಂದೆ ಹೆಸರಿನಲ್ಲಿ ಇನ್ಸೂರೆನ್ಸ್ ವಿಮೆಯಿದೆ ಅಪಘಾತದಲ್ಲಿ ಸಾವನಪ್ಪಿದ್ರೆ ಡಬಲ್ ಹಣ ಸಿಗುವ ಆಸೆಯಲ್ಲಿ ಈ ಕೃತ್ಯ ಮಾಡಿದ್ದೇನೆ ಎಂದು ತಿಳಿಸಿದ್ದಾನೆ.
ತಂದೆ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅಣ್ಣನಾದ ಧರ್ಮ ಕೂಡ ನೇಣಿಗೆ ಶರಣಾಗಿದ್ದಾನೆ.
ಆರೋಪಿಯನ್ನ ವಶಪಡಿಸಿಕೊಂಡಿರುವ ಬೈಲುಕೊಪ್ಪೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ…

Spread the love

Related post

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…
ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…

Leave a Reply

Your email address will not be published. Required fields are marked *